ಡೈಲಿ ವಾರ್ತೆ:01ಜನವರಿ 2023

ಬೆಳ್ತಂಗಡಿ: ರಸ್ತೆ ಅಪಘಾತ: ಧಾರ್ಮಿಕ ಮುಖಂಡ ನೌಶಾದ್ ಹಾಜಿ ಸೂರಲ್ಪಾಡಿ ಸಹಿತ ಇಬ್ಬರು ಮೃತ್ಯು

ಬೆಳ್ತಂಗಡಿ: ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾಮಾಜಿಕ, ಧಾರ್ಮಿಕ ಮುಖಂಡ ನೌಶಾದ್ ಹಾಜಿ ಸೂರಲ್ಪಾಡಿ ಹಾಗೂ ಅವರ ಕಾರು ಚಾಲಕ ಮುಷರಫ್ ಮೃತಪಟ್ಟ ಘಟನೆ ಗುರುವಾಯನಕೆರೆ ವೇಣೂರು ರಸ್ತೆಯ ಗರ್ಡಾಡಿ ಸಮೀಪ ನಡೆದಿದೆ.

ನೌಶಾದ್ ಹಾಜಿ ಸೂರಲ್ಪಾಡಿ

ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.