ವರದಿ-ಕುಮಾರ ನಾಯ್ಕ ಉಪಸಂಪಾದಕರು


ಭಟ್ಕಳ: ಬೀದರ ಜಿಲ್ಲೆಯ ಹುಮನಾಬಾದ ತಾಲೂಕಿನ ತಹಶೀಲ್ದಾರಾದ ಪ್ರದೀಪ ಹಿರೇಮಠ ಇವರ ಮೇಲೆ ಕೆಲಸದ ಸಮಯದಲ್ಲಿ ಹಲ್ಲೆ ಮಾಡಿದ್ದು ಖಂಡಿಸಿ ,ಇಂತವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಭಟ್ಕಳ ತಾಲೂಕಿನ ಸಮಸ್ತ ನೌಕರರ ಪರವಾಗಿ ಭಟ್ಕಳ್ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಶಂಕರ್ ನಾಯ್ಕ ಇವರ ಅಧ್ಯಕ್ಷತೆಯಲ್ಲಿ ತಾಲೂಕಿನ ಎಲ್ಲಾ ಇಲಾಖೆಯ ವೃಂದ ಸಂಘದ ಅಧ್ಯಕ್ಷರು ಹಾಗೂ ಪಧಾದಿಕಾರಿಗಳು ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ತಾಲೂಕಿನ ನೌಕರರು ಭಾಗವಹಿಸಿ ಭಟ್ಕಳ ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಭಟ್ಕಳ ತಾಲೂಕ ಸರಕಾರಿ ನೌಕರರ ಸಂಘದ ಅಧ್ಯಕ್ಷ ಶಂಕರ್ ನಾಯ್ಕ, ಪ್ರಕಾಶ್ ಶಿರಾಲಿ, ಗಣೇಶ, ಸುನೀಲ್ ಮುಂತಾದವರು ಉಪಸ್ಥಿತರಿದ್ದರು.