ಡೈಲಿ ವಾರ್ತೆ:20 ಜನವರಿ 2023

ವಿಟ್ಲ: ಜಾತ್ರೆಯಲ್ಲಿ ವ್ಯಾಪಾರಿಗೆ ಹಲ್ಲೆ ಆರೋಪ: 6 ಮಂದಿಯ ವಿರುದ್ಧ ದೂರು ದಾಖಲು

ವಿಟ್ಲ: ಜಾತ್ರೆ ಸಂತೆಯಲ್ಲಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಗಣೇಶ್ ಕಡಂಬು, ಮಂಜುನಾಥ ಮತ್ತು ಇತರ ನಾಲ್ಕು ಮಂದಿ ಎಂದು ಗುರುತಿಸಲಾಗಿದೆ.

ಸುರೇಶ್ ದಾಸ್ ಎಂಬವರು ಪಂಚಲಿಗೇಶ್ವರ ದೇಗುಲದ ಪಕ್ಕದಲ್ಲಿ ದೇವಸ್ಥಾನದ ಅನುಮತಿಯಂತೆ ಫ್ಯಾನ್ಸಿ ಮಳಿಗೆ ಇಟ್ಟು ವ್ಯಾಪಾರ ಮಾಡಿಕೊಂಡಿದ್ದರು. ರಾತ್ರಿ 12.30ಕ್ಕೆ ವ್ಯಾಪಾರ ಮುಗಿಸಿ ಮಳಿಗೆಯನ್ನು ಮುಚ್ಚುವ ಸಮಯದಲ್ಲಿ ಗಣೇಶ್ ಕಡಂಬು, ಮಂಜುನಾಥ ಮತ್ತು ಇತರ ನಾಲ್ಕು ಯುವಕರು ಬಂದು ಅಂಗಡಿ ಏಕೆ ಬಂದ್ ಮಾಡುತ್ತಿಯಾ ಎಂದು ಹೇಳಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿರುವುದಾಗಿ ದೂರು ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.