ಡೈಲಿ ವಾರ್ತೆ:21 ಜನವರಿ 2023

ಚಿಕ್ಕಮಗಳೂರು: ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಕಾರು; ಇಬ್ಬರು ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅಜ್ಜಂಪುರ ತಾಲೂಕಿನ ಮಾಕನಹಳ್ಳಿ ಬಳಿ ನಡೆದಿದೆ.

ಶಿವನಿ ಮೆಸ್ಕಾಂ ನಲ್ಲಿ ಕೆಲಸ ಮಾಡುತ್ತಿದ್ದ ಜೆಇ.‌ ಕಿರಣ್ (32) ನಾಗರಾಜ್ (40) ಮೃತ ದುರ್ಧೈವಿಗಳೆಂದು ತಿಳಿದು ಬಂದಿದೆ.

ಕಾರಿನಲ್ಲಿ ಹೋಗುತ್ತಿರುವ ವೇಳೆ ಏಕಾಏಕಿ ಚಾಲಕನ ನಿಯತ್ರಣ ತಪ್ಪಿ ಮಾಕನಹಳ್ಳಿ ಬಳಿ ಮರಕ್ಕೆ ಢಿಕ್ಕಿ ಹೊಡೆದಿದೆ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಳೆದ ಕೆಲ ಸಮಯದಿಂದ ಶಿವನಿ ಮೆಸ್ಕಾಂ ನಲ್ಲಿ ಜೆಇ ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮೂಲಕದ ಕಿರಣ್ ಅವರಿಗೆ ಫೆ.8 ರಂದು ಮದುವೆ ನಿಶ್ಚಯವಾಗಿತ್ತು. ನಾಗರಾಜ್ ಅಜ್ಜಂಪುರ ತಾಲೂಕಿನ ಶಿವನಿ ಮೂಲದವರು ಎಂದು ತಿಳಿದು ಬಂದಿದೆ.