ಡೈಲಿ ವಾರ್ತೆ:24 ಜನವರಿ 2023

ಕುಂಬಳೆ: ಲಾರಿಗಳ ನಡುವೆ ಅಪಘಾತ: ಚಾಲಕರಿಬ್ಬರು ಗಂಭೀರ

ಕಾಸರಗೋಡು: ಲಾರಿಗಳ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಚಾಲಕರು ಗಂಭೀರ ಗಾಯ ಗೊಂಡ ಘಟನೆ ಮಂಗಳವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಆರಿಕ್ಕಾಡಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಗಾಯ ಗೊಂಡ ಚಾಲಕರನ್ನು ಕುಂಬಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಚಾಲಕರಿಬ್ಬರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಅಡುಗೆ ಅನಿಲ ಸಿಲಿಂಡರ್ ಹೇರಿಕೊಂಡು ತೆರಳುತ್ತಿದ್ದ ಲಾರಿ ಮತ್ತು ಇನ್ನೊಂದು ಸರಕು ಲಾರಿ ನಡುವೆ ಅಪಘಾತ ನಡೆದಿದೆ ಎನ್ನಲಾಗಿದೆ. ಢಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಸಿಲಿಂಡರ್ ಲಾರಿಯು ರಾಷ್ಟ್ರೀಯ ಹೆದ್ದಾರಿ ಬದಿ ಫಿಲ್ಲರ್ ನಿರ್ಮಾಣಕ್ಕೆ ತೊಡಲಾದ ಹೊಂಡಕ್ಕೆ ಬಿದ್ದಿದೆ. ಅಪಘಾತದ ಹಿನ್ನಲೆಯಲ್ಲಿ ಕೆಲ ಸಮಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಯಿತು.
ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.