ಕುಂದಾಪುರ: ಬ್ಯಾರೀಸ್ ವಿದ್ಯಾಸಂಸ್ಥೆಗಳು ಕೋಡಿ ಕುಂದಾಪುರ ಅವರು ಪ್ರಾರಂಭಿಸಿದ ಸ್ವಚ್ಛ ಕಡಲತೀರ ಹಸಿರು ಕೋಡಿ – 2022ರ ಅಭಿಯಾನದ ಪ್ರಥಮ ಹಂತ ಕೋಡಿಯಲ್ಲಿ ದಿನಾಂಕ 30 ರಂದು ರವಿವಾರ ನಡೆಯಿತು.

ವಿದ್ಯಾರ್ಥಿಗಳು, ಶಿಕ್ಷಕರು, ಆಡಳಿತ ಮಂಡಳಿಯ ಸದಸ್ಯರು, ರಕ್ಷಕ-ಶಿಕ್ಷಕ ಸಂಘದ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು, ಊರಿನ ಪ್ರಮುಖರು ಹಾಗೂ ಮಹಾಜನರು ಮತ್ತು ನಿಸರ್ಗ ಪ್ರಿಯರು ಈ ಅಭಿಯಾನದಲ್ಲಿ ಉತ್ಸಾಹದಿಂದ ಪಾಲ್ಗೊಂಡು ಕೋಡಿ ಕಡಲ ತೀರವನ್ನು ಸ್ವಚ್ಛಗೊಳಿಸಿದರು.



ಸ್ವಚ್ಛ ಮನಸ್ಸುಗಳಿಂದ ನೆರವೇರಿಸುತ್ತಿರುವ ಈ ಸ್ವಚ್ಛತಾ ಅಭಿಯಾನ ಜನರಲ್ಲಿ ಮುಖ್ಯವಾಗಿ ವಿದ್ಯಾರ್ಥಿಗಳಲ್ಲಿ ಮತ್ತು ಯುವಕರಲ್ಲಿ ಪರಿಸರದ ಸದ್ಬಳಿಕೆ ಮತ್ತು ಸಂರಕ್ಷಣೆಯ ಕುರಿತು ಕೆಲಸ ಮಾಡುವ ಪ್ರವರ್ತಿಯನ್ನು ಹುಟ್ಟು ಹಾಕುವುದೆಂಬ ನಂಬಿಕೆ ಮತ್ತು ವಿಶ್ವಾಸವನ್ನು ಬ್ಯಾರಿಸ್ ವಿದ್ಯಾಸಂಸ್ಥೆಗಳ ಚೇರ್ಮನ್ ಸೈಯದ್ ಮೊಹಮ್ಮದ್ ಬ್ಯಾರಿಯವರು ವ್ಯಕ್ತಪಡಿಸಿದ್ದಾರೆ.

ಈ ಕಾರ್ಯದಲ್ಲಿ ನಿರಂತರವಾಗಿ ನಮಗೆ ಸಹಕಾರವನ್ನು ನೀಡುತ್ತಿರುವ ಕುಂದಾಪುರ ಪುರಸಭೆಯ ಚೀಫ್ ಆಫೀಸರ್ ಹಾಗೂ ಪದಾಧಿಕಾರಿಗಳಿಗೆ ಮತ್ತು ಎಲ್ಲಾ ಸಿಬ್ಬಂದಿ ವರ್ಗದವರಿಗೆ ಅಂತೆಯೇ ಕೋಟೇಶ್ವರ ಗ್ರಾಮ ಪಂಚಾಯಿತಿಯ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಬ್ಯಾರೀಸ್ ಗ್ರೂಪ್ ಅಪ್ ಇನ್ಸ್ಟಿಟ್ಯೂಷನ್ ಅಧ್ಯಕ್ಷರಾದ ಹಾಜಿ ಕೆ ಎಂ ಅಬ್ದುಲ್ ರಹಿಮಾನ್ ತಿಳಿಸಿದ್ದಾರೆ.