ಡೈಲಿ ವಾರ್ತೆ: 26 ಜನವರಿ 2023

ಹಾಸನ: ಗಾಂಧಿಯ ಪ್ರತಿಮೆ ವಿರೂಪ: ಉದ್ಘಾಟನಾ ಕಾರ್ಯಕ್ರಮ ರದ್ದು

ಹಾಸನ: ನೂತನವಾಗಿ ನಿರ್ಮಾಣವಾಗಿರುವ ಗಾಂಧಿ ಪ್ರತಿಮೆ ಕಾರ್ಯಕ್ರಮವು ಗಾಂಧಿ ಪ್ರತಿಮೆ ವಿರೂಪಗೊಂಡಿರುವ ಕಾರಣ ರದ್ದಾಗಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಲವು ಜಿಲ್ಲೆಗಳಲ್ಲಿ ಗಾಂಧಿ ಭವನ ನಿರ್ಮಾಣ ಮಾಡುತ್ತಿದ್ದು, ಹಾಸನದಲ್ಲಿ ಸುಮಾರು 23 ಲಕ್ಷ ರೂ. ವೆಚ್ಚದಲ್ಲಿ ಗಾಂಧಿ ಭವನ ನಿರ್ಮಾಣಗೊಂಡಿದೆ.

ಇದೇ ಗಾಂಧಿ ಭವನದಲ್ಲಿ ಗಾಂಧಿ ಪ್ರತಿಮೆಯನ್ನೂ ಸ್ಥಾಪಿಸಲಾಗಿದೆ. ಆದರೆ ಈ ಪ್ರತಿಮೆ ವಿರೂಪಗೊಂಡಿರುವುದು ವಿವಾದಾತ್ಮಕವಾಗಿದೆ.

ಗಾಂಧಿಯ ಪ್ರತಿಮೆ ವಿರೂಪಗೊಂಡಿರುವ ಹಿನ್ನೆಲೆಯಲ್ಲಿ ವಿವಾದ ಸೃಷ್ಟಿಯಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ನಡೆಯಬೇಕಾಗಿದ್ದ ಕಾರ್ಯಕ್ರಮ ರದ್ದಾಗಿದೆ.