ಡೈಲಿ ವಾರ್ತೆ: 26 ಜನವರಿ 2023

SDTU, ಉಡುಪಿ ಜಿಲ್ಲೆ ವತಿಯಿಂದ ಪಡುಬಿದ್ರೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಉಡುಪಿ, ಜ 26: ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ (SDTU) ವತಿಯಿಂದ ಪಡುಬಿದ್ರೆಯಲ್ಲಿ ಗಣರಾಜ್ಯೋತ್ಸವ ಆಚರಣೆ ನಡೆಸಲಾಯಿತು
SDTU ಉಡುಪಿ ಜಿಲ್ಲಾಧ್ಯಕ್ಷ ಅಬ್ದುಲ್ ಖಾದರ್ ಮಲ್ಲಾರ್ ಧ್ವಜಾರೋಹಣಗೈದರು ಈ ಸಂದರ್ಭದಲ್ಲಿ ಮಾತನಾಡಿದ ಅವರು
ಜನವರಿ 26 ರಂದು ಆಚರಿಸಲಾಗುವ ಗಣರಾಜ್ಯೋತ್ಸವದ ದಿನ ಪ್ರತಿ ಭಾರತೀಯನ ಪಾಲಿಗೆ ಹೆಮ್ಮೆಯ ದಿನವಾಗಿದೆ. ಸ್ವಾತಂತ್ರ್ಯ ದಿನಾಚರಣೆಯನ್ನು ಎಷ್ಟು ಸಂಭ್ರಮದಿಂದ ಆಚರಣೆ ಮಾಡಲಾಗುತ್ತದೆಯೋ, ಅಷ್ಟೇ ಸಂಭ್ರಮದಿಂದ ದೇಶದಲ್ಲಿ ಗಣರಾಜ್ಯೋತ್ಸವವನ್ನು ಆಚರಣೆ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಕಾರ್ಮಿಕ ಸಂಘಟನೆಯಾದ SDTU ಉಡುಪಿ ಜಿಲ್ಲೆ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಗುತ್ತದೆ SDTU ಎಂಬುವೂದು ಕಾರ್ಮಿಕರನ್ನು ಒಟ್ಟು ಗೂಡಿಸಿ ಅವರ ಹಕ್ಕು ಮತ್ತು ಅವಕಾಶಗಳಿಗಾಗಿ ಹೋರಾಟ ಮಾಡುವ ಒಂದು ಒಕ್ಕೂಟವಾಗಿದೆ. ಈ ನಿಟ್ಟಿನಲ್ಲಿ ಸಂವಿಧಾನ ನೀಡಿದ ಎಲ್ಲಾ ಹಕ್ಕುಗಳನ್ನು ಸದುಪಯೋಗಪಡಿಸಿ ಕಾರ್ಮಿಕರು ಸಮಾಜದಲ್ಲಿ ಉತ್ತಮ ಬದುಕನ್ನು ಸಾಧಿಸಲು SDTU ಶ್ರಮಿಸುತ್ತದೆ ಎಂದರು

ಈ ಸಂದರ್ಭದಲ್ಲಿ SDTU ಪಡುಬಿದ್ರಿ ಘಟಕದ ಅಧ್ಯಕ್ಷ ರಿಯಾಜ್ ಕಂಚಿನಡ್ಕ , SDTU ಪಡುಬಿದ್ರಿ ಘಟಕದ ಪ್ರಧಾನ ಕಾರ್ಯದರ್ಶಿ ಹೈದರ್ ಕಂಚಿನಡ್ಕ, SDTU ಜಿಲ್ಲಾ ಸಮಿತಿ ಸದಸ್ಯ ಫಿರೋಜ್, ಅನ್ವರ್, SDPI ಪಡುಬಿದ್ರಿ ಗ್ರಾಮ ಸಮಿತಿ ಅಧ್ಯಕ್ಷರಾದ
ಇಬ್ರಾಹಿಂ, ಮತ್ತಿತರರು ಉಪಸ್ಥಿತರಿದ್ದರು