ಕಾರ್ಕಳ : ಹಲವಾರು ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅಜೆಕಾರು ಠಾಣೆ ಪೊಲೀಸರು ಮಿ೦ಚಿನ ಕಾರ್ಯಾಚರಣೆ ನಡೆಸಿದ್ದು ಕುಖ್ಯಾತ ಗೋ ಕಳ್ಳ ಉದ್ಯಾವರ ಪಿತ್ರೋಡಿಯ ಚೇತು ಯಾನೆ ಚೇತನ್, ಗೋಸಾಗಾಟದ ವಾಹನ ಬಿಟ್ಟು ಪರಾರಿಯಾಗಿದ್ದಾನೆ.

ಹಿಂದೂ ಸಂಘಟನೆಯ ಕಾರ್ಯಕರ್ತರು ಗೋಸಾಗಾಟದ ಬಗ್ಗೆ ಖಚಿತ ಮಾಹಿತಿ ಪಡೆದು ಅಜೆಕಾರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಈ ಬಗ್ಗೆ ಕಾರ್ಯಾಚರಣೆ ನಡೆಸಿದ್ದು ಹಲವಾರು ಗೋವುಗಳನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಕುಖ್ಯಾತ ಗೋಕಳ್ಳ ಚೇತು ಯಾನೆ ಚೇತನ್ ಎಂಬವನು ವಾಹನ ಬಿಟ್ಟು ಪರಾರಿಯಾಗಿದ್ದು, ಗೋವುಗಳನ್ನು ಪೊಲೀಸರು ರಕ್ಷಿಸಿದರು.