ಡೈಲಿ ವಾರ್ತೆ:11 ಫೆಬ್ರವರಿ 2023

ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಬಸ್ ಢಿಕ್ಕಿ : ಗಾಜು ಒಡೆದು ಹೊರಕ್ಕೆಸೆಯಲ್ಪಟ್ಟ ಯುವತಿ ಗಂಭೀರ

ಬಂಟ್ವಾಳ: ಖಾಸಗಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಧರೆಗೆ ಗುದ್ದಿ ಓರ್ವ ಯುವತಿ ಗಂಭೀರವಾಗಿ ಗಾಯಗೊಂಡರೆ , ಉಳಿದ ಅನೇಕ ಮಂದಿ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾದ ಘಟನೆ ವಿಟ್ಲ ಸಮೀಪದ ಕೆಲಿಂಜ ಎಂಬಲ್ಲಿ ನಡೆದಿದೆ.

ವಿಟ್ಲದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬೆಳಿಗ್ಗಿನ ಪ್ರಥಮ ಟ್ರಿಪ್ ನ ಸೆಲಿನಾ ಬಸ್ ಅಪಘಾತಗೊಂಡಿರುವುದು. ಬಸ್ ಗುದ್ದಿದ್ದ ಸಂದರ್ಭದಲ್ಲಿ ಬಸ್ ನ ಮುಂಭಾಗದ ಗಾಜು ಒಡೆದು ಯುವತಿ ಹೊರಕ್ಕೆ ಎಸೆಯಲ್ಪಟ್ಟಿದ್ದಾಳೆ. ಯುವತಿಗೆ ಗಂಭೀರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದಂತೆ ಅನೇಕ ಪ್ರಯಾಣಿಕರಿಗೂ ಗಾಯವಾಗಿದೆ.

ಘಟನೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.ಜಾಯಿಂಟ್ ವೀಲ್ ಕಡಿತಗೊಂಡು ಅಪಘಾತ ಸಂಭವಿಸಿದೆ ಎಂದು ಚಾಲಕ ಸ್ಪಷ್ಟನೆ ನೀಡುತ್ತಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅತಿಯಾದ ವೇಗ ಮತ್ತು ಓವರ್ ಟೇಕ್ ಮಾಡುವ ಭರದಲ್ಲಿ ಅಪಘಾತ ಸಂಭವಿಸರಬಹುದು ಎಂಬುದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ವಿಟ್ಲ ಪೋಲೀಸರು ಬೇಟಿ ನೀಡಿದ್ದಾರೆ.