ಡೈಲಿ ವಾರ್ತೆ:15 ಫೆಬ್ರವರಿ 2023

ಪುತ್ತೂರು: ಸಂಟ್ಯಾರ್‌ನಲ್ಲಿ ಕಾರು ಪಲ್ಟಿಯಾಗಿ ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯ ಮೃತ್ಯು

ಪುತ್ತೂರು: ಕಾರೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಫೆ.14ರಂದು ರಾತ್ರಿ ತಾಲೂಕಿನ ಸಂಟ್ಯಾರ್‌ನಲ್ಲಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟ ಕಾರು ಚಾಲಕನನ್ನು ನಿಡ್ಪಳ್ಳಿ ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯರಾದ ಮುಂಡೂರು ನಿವಾಸಿ ಮುರಳೀಧರ್ ಭಟ್ ಎಂದು ಗುರುತಿಸಲಾಗಿದೆ.

ಕೂಡಲೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಕಾರು ಬೆಟ್ಟಂಪಾಡಿ ಕಡೆ ಹೋಗುವಾಗ ವಿದ್ಯುತ್ ಕಂಬಕ್ಕೆ ಬಡಿದು 50 ಅಡಿ ಆಳದ ತೋಟಕ್ಕೆ ಬಿದ್ದಿದೆ ಎಂದು ತಿಳಿದುಬಂದಿದೆ.

ಕಾರಲ್ಲಿದ್ದವರನ್ನು ಬೆಟ್ಟಂಪಾಡಿಯ ದಿಲೀಪ್ ಕುಮಾರ್ ರಾವ್, ಶಶಿಕುಮಾರ್, ನವನೀತ್ ಹಾಗೂ ನಿಡ್ಪಳ್ಳಿ ಗ್ರಾಮ ಪಂಚಾಯತ್ ಸದಸ್ಯ ಮುರಳಿಧರ್ ಭಟ್ ಎಂದು ಸ್ಥಳೀಯರು ಗುರುತಿಸಿದ್ದಾರೆ.
ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.