ಡೈಲಿ ವಾರ್ತೆ:18 ಫೆಬ್ರವರಿ 2023

ಕೊಡಗು: ಗುಂಡಿಗೆ ಬಿದ್ದು ಕಾಡಾನೆ ಸಾವು

ಸೋಮವಾರಪೇಟೆ: ಗುಂಡಿಗೆ ಬಿದ್ದು ಮರಿಯಾನೆಯೊಂದು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಎಳನೀರುಗುಂಡಿಯಲ್ಲಿ ನಡೆದಿದೆ.

ಚಂದ್ರಶೇಖರ್ ಎಂಬುವವರು ತಮ್ಮ ತೋಟದಲ್ಲಿ ಘಟನೆ ನೀರಿನ ಟ್ಯಾಂಕ್ ನಿರ್ಮಿಸಲು ಗುಂಡಿಯನ್ನು ತೋಡಿ ಇಟ್ಟಿದ್ದರು. ಆದರೆ ಇದನ್ನು ಗಮನಿಸದ ಆನೆ ಗುಂಡಿಗೆ ಬಿದ್ದು ಮೃತಪಟ್ಟಿದೆ.
ಸ್ಥಳಕ್ಕೆ ವಲಾಯಾರಣ್ಯಾಧಿಕಾರಿ ಪ್ರಪುಲ್ ಶೆಟ್ಟಿ, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕ್ರೇನ್ ಮೂಲಕ ಗುಂಡಿಯಿಂದ ಆನೆಯನ್ನು ಎತ್ತಿ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ.