ಡೈಲಿ ವಾರ್ತೆ:19 ಫೆಬ್ರವರಿ 2023

ಪುದು ಗ್ರಾಮ ಪಂಚಾಯತ್ ಚುನಾವಣೆ : ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಪೂರ್ವಭಾವಿ ಸಿದ್ಧತಾ ಸಭೆ

ಬಂಟ್ವಾಳ : ಪುದು ಗ್ರಾಮ ಪಂಚಾಯತ್ ಚುನಾವಣಾ ಪ್ರಯುಕ್ತ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಪೂರ್ವಭಾವಿ ಸಿದ್ಧತಾ ಸಭೆಯು ಅಮ್ಮೆಮ್ಮಾರ್ – ಪುಂಚಮೆಯಲ್ಲಿ ಶನಿವಾರ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ ಕ್ಷೇತ್ರದ ಶಾಸಕ ಯು.ಟಿ.ಖಾದರ್ ಹಾಗೂ ಕಳೆದ ಬಾರಿಯ ಪುದು ಗ್ರಾಮ ಪಂಚಾಯತ್ ನ ಕಾಂಗ್ರೆಸ್ ಆಡಳಿತಾವಧಿಯಲ್ಲಿ ಆದ ಅಭಿವೃದ್ಧಿ ಕಾರ್ಯಗಳು ಹಾಗೂ ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಯ ದುರಾಡಳಿತದ ಬಗ್ಗೆ ಜನತೆಗೆ ಸಮರ್ಪಕವಾಗಿ ಮಾಹಿತಿ ನೀಡುವುದರ ಮೂಲಕ ಮುಂಬರುವ ಚುನಾವಣೆಯಲ್ಲಿ 34 ಸ್ಥಾನಗಳಲ್ಲೂ ಕಾಂಗ್ರೆಸ್ ಜಯಭೇರಿ ಯಾಗಬೇಕು ಎಂದು ಕರೆ ನೀಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ ಕಾಜವ, ಪಕ್ಷ ಪ್ರಮುಖರಾದ ಮಮತಾ ಗಟ್ಟಿ, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಚಂದ್ರಹಾಸ ಕರ್ಕೇರಾ, ಉಮರ್ ಫಾರೂಕ್, ವೃಂದಾ ಪೂಜಾರಿ, ಕೆ.ಕೆ.ಸಾಹುಲ್ ಹಮೀದ್, ಸುಹೈಲ್ ಖಂದಕ್, ರಮ್ಲಾನ್ ಮಾರಿಪಳ್ಳ, ಆಸಿಫ್ ಇಕ್ಬಾಲ್, ಇಸ್ಮಾಯಿಲ್ ಕೆ.ಇ.ಎಲ್, ಅಬೂಬಕ್ಕರ್ 10 ನೇ ಮೈಲಿಗಲ್ಲು, ಇಮ್ರಾನ್ ಅಮ್ಮೆಮ್ಮಾರ್ ಮೊದಲಾದವರು ಭಾಗವಹಿಸಿದ್ದರು.

ಇದೇ ವೇಳೆ ಪಕ್ಷದ ಹಿರಿಯ, ಕಿರಿಯ ಕಾರ್ಯಕರ್ತರ ಸಲಹೆ ಸೂಚನೆಗಳನ್ನು ಪಡೆದು ಕಾಂಗ್ರೆಸ್ ಬೆಂಬಲಿತ 34 ಮಂದಿ ಅಭ್ಯರ್ಥಿಗಳಿಗೆ ಚುನಾವಣಾ ಪ್ರಚಾರ ಕಾರ್ಯದ ಬಗ್ಗೆ ಮಾಹಿತಿ ನೀಡಲಾಯಿತು.