ಡೈಲಿ ವಾರ್ತೆ:20 ಫೆಬ್ರವರಿ 2023

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಗೆ ಅನಾರೋಗ್ಯ: ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ

ಮಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಕಾರ್ಯಕ್ರಮ ಪ್ರಯುಕ್ತ ನಗರಕ್ಕೆ ಆಗಮಿಸಿರುವ ಅರುಣ್ ಸಿಂಗ್ ಅವರು ಕೈ ನೋವಿನ ಕಾರಣದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಜೆಪಿ ನಡ್ಡಾ ಅವರು ರವಿವಾರ ರಾತ್ರಿ ಮಂಗಳೂರಿಗೆ ಬಂದು ವಾಸ್ತವ್ಯ ಹೂಡಿದ್ದರು. ವಿಮಾನ ನಿಲ್ದಾಣದಲ್ಲಿ ಅವರನ್ನು ಸ್ವಾಗತ ಮಾಡಿದ್ದ ಅರುಣ್ ಸಿಂಗ್ ಅವರೂ ನಗರದಲ್ಲೇ ವಾಸ್ತವ್ಯ ಹೂಡಿದ್ದರು.

ಜೆಪಿ ನಡ್ಡಾ ಅವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಷ್ಟ್ರೀಯ ಪ್ರ. ಕಾರ್ಯದರ್ಶಿ ಸಿ. ಟಿ. ರವಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಉಡುಪಿ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.