ಡೈಲಿ ವಾರ್ತೆ:20 ಫೆಬ್ರವರಿ 2023

ತೆಕ್ಕಟ್ಟೆ: ಪಾದಚಾರಿಗೆ ಕಾರು ಡಿಕ್ಕಿ, ಸ್ಥಳದ್ದಲ್ಲೇ ವ್ಯಕ್ತಿ ಸಾವು

ಕೋಟ: ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಡುಪಿಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಕಾರೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಸೋಮವಾರ ರಾತ್ರಿ ನಡೆದಿದೆ.

ಮೃತಪಟ್ಟ ವ್ಯಕ್ತಿ ತೆಕ್ಕಟ್ಟೆ ತೋಟದ ಬೆಟ್ಟು ನಿವಾಸಿ ಅಶೋಕ್ ಎಂದು ತಿಳಿದು ಬಂದಿದೆ.
ಕಾರಿನ ಚಾಲಕ ಪಾದಚಾರಿಯನ್ನು ತಪ್ಪಿಸಲು ಹೋಗಿ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಬೀಜಾಡಿ ಅರಸರಬೆಟ್ಟುವಿನ ವಿಮಾಲ ಆಚಾರ್ ಎಂಬುವರಿಗೂ ಕಾರು ಡಿಕ್ಕಿ ಹೊಡೆದಿದ್ದು ಇವರು ಕೂಡ ಗಾಯಗೊಂಡು ಕೋಟೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.