ಡೈಲಿ ವಾರ್ತೆ:21 ಫೆಬ್ರವರಿ 2023

ಮುತಾಲಿಕ್ ವಿರುದ್ಧ ಹೇಳಿಕೆ: ಶ್ರೀರಾಮ ಸೇನೆಯಿಂದ ನಾಲ್ವರು ವಜಾ!

ಉಡುಪಿ: ಮುತಾಲಿಕ್ ಕಾರ್ಕಳ ಕ್ಷೇತ್ರದಲ್ಲಿ ಸ್ಪರ್ಧಿಸುವುದನ್ನು ವಿರೋಧಿಸಿದ್ದ ಶ್ರೀರಾಮಸೇನೆ ಸಂಘಟನೆಯ ನಾಲ್ವರನ್ನು ವಜಾಗೊಳಿಸಿ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಆದೇಶ ಹೊರಡಿಸಿದ್ದಾರೆ.

ರಾಜ್ಯ ಸಮಿತಿ ಕೈಗೊಂಡ ನಿರ್ಣಯದಂತೆ ರಾಜ್ಯ ಉಪಾಧ್ಯಕ್ಷ ಮಹೇಶ್ ಕಟ್ಟಿನಮನೆ,ಉಡುಪಿ-ಮಂಗಳೂರು ವಿಭಾಗ ಅಧ್ಯಕ್ಷ ಮೋಹನ್ ಭಟ್, ಗೌರವಾಧ್ಯಕ್ಷ ಚಂದ್ರಕಾಂತ್ ಶೆಟ್ಟಿ ಹಾಗೂ ಶಿವಮೊಗ್ಗ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಬಂಗೇರ ಅವರನ್ನು ಶ್ರೀರಾಮಸೇನಾ ಸಂಘಟನೆಯಿಂದ ವಜಾಗೊಳಿಸಲಾಗಿದೆ‌.

ಫೆ.19ರಂದು ಇವರು ಸಭೆ ಕರೆದು ಮುತಾಲಿಕ್ ಕಾರ್ಕಳದಲ್ಲಿ ಸ್ಪರ್ಧಿಸುವುದನ್ನು ವಿರೋಧಿಸಿ ಹೇಳಿಕೆ ನೀಡಿದ್ದರು.