ಡೈಲಿ ವಾರ್ತೆ:22 ಫೆಬ್ರವರಿ 2023

ಕುಂದಾಪುರ: ಕಾಂಗ್ರೆಸ್ ಬೂತ್ ಅಧ್ಯಕ್ಷರ ಮತ್ತು ಬಿಎಲ್ಎಗಳ ಸಭೆ!

ಕರ್ನಾಟಕದಲ್ಲಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಬಹಳ ದೊಡ್ಡ ಅವಕಾಶವಿದೆ. ಇಡೀtv ದೇಶದ ಕಣ್ಣು ಇಂದು ಕರ್ನಾಟಕದ ಮೇಲಿದೆ. ಕುಂದಾಪುರದಲ್ಲಿ ಕಳೆದ ಹಲವು ವರ್ಷಗಳಿಂದ ನಮ್ಮ ಪಕ್ಷವನ್ನು ಸಂಘಟಸಿಲು ಸಾಧ್ಯವಾಗಲಿಲ್ಲ. ಈ ಭಾರೀ ಮಾತ್ರ ಜನರೇ ನಮ್ಮ ಪಕ್ಷದ ಕಡೆ ಒಲವನ್ನು ತೋರುತ್ತಿರುವ ಮಾಹಿತಿ ನಮಗೆ ಲಭಿಸಿದೆ ಎಂದು ಎಐಸಿಸಿ ವೀಕ್ಷಕ ಕೇರಳ ಲೋಕಸಭಾ ಸದಸ್ಯ ಟಿ.ಪ್ರತಾಪನ್ ಹೇಳಿದರು.

ಕುಂದಾಪುರ ಮತ್ತು ಕೋಟ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ತೆಕ್ಕಟ್ಟೆ ಶ್ರೀ ದುರ್ಗಾಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ಬುಧವಾರ ಜರುಗಿದ ಕುಂದಾಪುರ ವಿಧಾನಸಭಾ ಕ್ಷೇತ್ರದ ಬೂತ್ ಅಧ್ಯಕ್ಷರ ಮತ್ತು ಬಿಎಲ್ಎ-2 ಇವರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಕಾರ್ಯದರ್ಶಿ ಎಮ್ಎ ಗಪೂರ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಶಿವರಾಮ ಶೆಟ್ಟಿ, ಕಾಂಗ್ರೆಸ್ ಆಕಾಂಕ್ಷಿ ಅಭ್ಯರ್ಥಿಗಳಾದ ದಿನೇಶ್ ಹೆಗ್ಡೆ ಮೊಳಹಳ್ಳಿ , ಅಶೋಕ್ ಪೂಜಾರಿ, ಕಿಶನ್ ಹೆಗ್ಡೆ, ಶ್ಯಾಮಲ ಭಂಡಾರಿ,ಹಾಗೂ ರಾಜ್ಯ ಮೀನುಗಾರಿಕಾ ಅಧ್ಯಕ್ಷ ಮಂಜುನಾಥ್, ಮುರುಳಿ ಶೆಟ್ಟಿ, ತೆಕ್ಕಟ್ಟೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಮತಾ ದೇವಾಡಿಗ, ಬಾಲಕೃಷ್ಣ, ಮಹಿಳಾ ಅಧ್ಯಕ್ಷೆ ದೇವಕಿ ಸಣ್ಣಯ್ಯ, ಮುಖಂಡರಾದ ಸತೀಶ್ ಕಿಣಿ, ಇಚ್ಚಿತಾರ್ಥ ಶೆಟ್ಟಿ, ಕುಂದಾಪುರ ವಿಧಾನಸಭಾ ಕ್ಷೇತ್ರದ ಬೂತ್ ಅಧ್ಯಕ್ಷರು ಮತ್ತು ಬಿಎಲ್ಎಗಳು, ಮುಂಚೂಣಿ ಘಟಕಗಳ ಅಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ತಾ ಕಾರ್ಯಕ್ರಮ ನಿರೂಪಿಸಿದರು.
ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಂಕರ್ ಕುಂದರ್ ವಂದಿಸಿದರು.