ಡೈಲಿ ವಾರ್ತೆ:24 ಫೆಬ್ರವರಿ 2023

ಮಂಗಳೂರು: ನೂತನ ನಗರ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಜೈನ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಇದುವರೆಗೆ ಆಯುಕ್ತರಾಗಿದ್ದ ಎನ್.ಶಶಿ ಕುಮಾರ್ ಅವರನ್ನು ರೈಲ್ವೇ ಡಿಐಜಿಯಾಗಿ ಗುರುವಾರ ವರ್ಗಾವಣೆ ಮಾಡಲಾಗಿತ್ತು. ಬೆಂಗಳೂರು ಪಶ್ಚಿಮ ವಿಭಾಗದ ಟ್ರಾಫಿಕ್ ಡಿಸಿಪಿಯಾಗಿದ್ದ ಕುಲದೀಪ್ ಜೈನ್ ಅವರನ್ನು ಮಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು.
ಕುಮಾರ್ ಜೈನ್, ಭ್ರಷ್ಟಾಚಾರ ಸಹಿಸುವುದಿಲ್ಲ. ಅಧಿಕಾರಿಗಳು ಭ್ರಷ್ಟಾಚಾರಕ್ಕೆ ಅವಕಾಶ ನೀಡಬಾರದು. ಎಲ್ಲ‌ ರೀತಿಯ ಅಕ್ರಮ ಚಟುವಟಿಕೆ ತಡೆಗೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಎಲ್ಲರ ಸಹಕಾರದಿಂದ ಜನರಿಗೆ ಅನುಕೂಲಕರವಾಗಿ ಕಾರ್ಯನಿರ್ವಹಿಸುತ್ತೇವೆ ಎಂದರು.
ಕುಲದೀಪ್ ಕುಮಾರ್ ಜೈನ್ ಅವರು 2011ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದಾರೆ.