ಡೈಲಿ ವಾರ್ತೆ:28 ಫೆಬ್ರವರಿ 2023

ರಾಜಕೀಯ ನಿವೃತ್ತಿ ಘೋಷಿಸಿದ ಶಾಸಕ ತನ್ವೀರ್ ಸೇಠ್

ಮೈಸೂರು: ನರಸಿಂಹರಾಜ ಕ್ಷೇತ್ರದ ಶಾಸಕ, ಮಾಜಿ ಸಚಿವ ತನ್ವೀರ್ ಸೇಠ್ ರಾಜಕೀಯ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ.

ಚುನಾವಣೆ ಹೊಸ್ತಿಲಲ್ಲಿ ರಾಜಕೀಯ ನಿವೃತ್ತಿ ಘೋಷಿಸಿದ್ದು, ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.
ಡಿಸೆಂಬರ್ ನಲ್ಲಿಯೇ ಎಐಸಿಸಿ ಹಾಗೂ ಕೆಪಿಸಿಸಿ ಅಧ್ಯಕ್ಷರಿಗೆ ನಿವೃತ್ತಿ ಘೋಷಿತ ಪತ್ರವನ್ನು ತನ್ವೀರ್ ಸೇಠ್ ನೀಡಿದ್ದರು. ಆದರೆ, ಅವರು ನಿರಾಕರಿಸಿದ್ದರು ಎಂದು ತಿಳಿದುಬಂದಿದೆ.

ಅನಾರೋಗ್ಯದ ಕಾರಣ ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ. ನನಗೆ ಈ ಬಾರಿ ಟಿಕೆಟ್ ಬೇಡ. ನಾನು ಇನ್ಮುಂದೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸಲ್ಲ ಎಂದು ಹೈಕಮಾಂಡ್’ಗೆ ಬರೆದ ಪತ್ರದಲ್ಲಿ ತನ್ವೀರ್ ತಿಳಿಸಿದ್ದಾರೆ.
ನನ್ನ ಮೇಲೆ ಹಲ್ಲೆಯಾದ ಬಳಿಕ ಆರೋಗ್ಯ ತುಂಬಾ ಏರುಪೇರಾಗಿದೆ. ಮೊದಲಿನಂತೆ ನಾನು ಮಾನಸಿಕ ಹಾಗೂ ದೈಹಿಕವಾಗಿಯೂ ಶಕ್ತಿಯುತವಾಗಿಲ್ಲ. ಹಾಗಾಗಿ ನನಗೆ ಟಿಕೆಟ್ ಬೇಡ. ಆದರೆ ಕಾಂಗ್ರೆಸ್’ನಲ್ಲೇ ಇರುತ್ತೇನೆ ಎಂದು ತನ್ವೀರ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.