ಡೈಲಿ ವಾರ್ತೆ:02 ಮಾರ್ಚ್ 2023

ಮಣಿಪಾಲ: ಮನೆ ಕಳ್ಳತನ ಪ್ರಕರಣ ಇಬ್ಬರು ಯುವಕರ ಬಂಧನ, 4 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

ಉಡುಪಿ: ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಅಲೆವೂರು ಆದರ್ಶ ನಗರದ ವರುಣ(19), ಮೂಡು ಅಲೆವೂರಿನ ನೆಹರು ನಗರದ ಕಾರ್ತಿಕ ಪೂಜಾರಿ (19) ಬಂಧಿತರು.
ಬಂಧಿತರಿಂದ ಕಳವು ಮಾಡಿದ 2,40,000 ರೂ. ಮೌಲ್ಯದ ಚಿನ್ನಾಭರಣ, 1 ಸ್ಕೂಟರ್ ಹಾಗೂ ಕೃತ್ಯಕ್ಕೆ ಬಳಸಿದ 1 ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ಈ ಹಿಂದೆ ಕುಂದಾಪುರ ಠಾಣಾ ವ್ಯಾಪ್ತಿಗೆ ಸಂಬಂಧಪಟ್ಟಂತೆ 2 ಪ್ರಕರಣ ಹಾಗೂ ಮಣಿಪಾಲ ಠಾಣೆಯ 1 ಪ್ರಕರಣ ಸೇರಿ ಒಟ್ಟು 3 ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಈ 3 ಪ್ರಕರಣಗಳನ್ನು ಭೇದಿಸಿದ ಪೊಲೀಸರು ಆರೋಪಿಗಳಿಂದ ಸುಮಾರು 4 ಲಕ್ಷ ಮೌಲ್ಯದ ಸೊತ್ತು ಗಳನ್ನು ವಶಪಡಿಸಿಕೊಂಡಿದ್ದಾರೆ.