ಡೈಲಿ ವಾರ್ತೆ:04 ಮಾರ್ಚ್ 2023

ಕೋಟ: ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ – ಪಾದಾಚಾರಿ ಮೃತ್ಯು

ಕೋಟ: ಸ್ಕೂಟಿ ಡಿಕ್ಕಿ ಹೊಡೆದು ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಮೃತಪಟ್ಟ ಘಟನೆ ಸಾಸ್ತಾನ ಬಸ್ ನಿಲ್ದಾಣದ ಬಳಿ ನಡೆದಿದೆ.

ಮೃತರನ್ನು ನಾರಾಯಣ ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ವೇಳೆ ಇವರು ಸಾಸ್ತಾನ ಬಸ್ ನಿಲ್ದಾಣದ ಸಮೀಪ ರಸ್ತೆ ದಾಟಲು ನಿಂತಿದ್ದ ವೇಳೆ ಸ್ಕೂಟಿ ಸವಾರ ಅತೀವೇಗ, ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ಸವಾರಿ ಮಾಡಿಕೊಂಡು ನಾರಾಯಣ ಅವರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಪಾದಾಚಾರಿ ನಾರಾಯಣ ಅವರಿಗೆ ತಲೆಗೆ ತೀವ್ರ ತರದ ಗಾಯವಾಗಿದ್ದು, ಕಾಲಿಗೆ ತರಚಿದ ಗಾಯವಾಗಿರುತ್ತದೆ. ಅಲ್ಲದೇ ಸ್ಕೂಟಿ ಸವಾರನು ಸ್ಕೂಟಿ ಸಮೇತ ರಸ್ತೆಗೆ ಬಿದ್ದಿದ್ದು ಎರಡೂ ಕೈಗೆ, ಮುಖಕ್ಕೆ ರಕ್ತ ಗಾಯವಾಗಿದೆ. ಗಾಯಾಳುಗಳನ್ನು ಬ್ರಹ್ಮಾವರ ಮಹೇಶ್ ಆಸ್ಪತ್ರೆಗೆಂದು ಕರೆದುಕೊಂಡು ಹೋಗಿದ್ದು ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಪಾದಾಚಾರಿ ನಾರಾಯಣ ರವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.