ಡೈಲಿ ವಾರ್ತೆ:07 ಮಾರ್ಚ್ 2023

ಕಾಪಿನಾಡು ಕಾಡ್ಗಿಚ್ಚಿಗೆ ಧಗ-ಧಗ ಹೊತ್ತಿ ಉರಿದ ಅರಣ್ಯ ಇಲಾಖೆ ಸಿಬ್ಬಂದಿಗಳ ಮೂರು ಬೈಕ್.!

ಚಿಕ್ಕಮಗಳೂರು: ಕಾಫಿನಾಡು ಕಾಡ್ಗಿಚ್ಚಿಗೆ ಅರಣ್ಯ ಇಲಾಖೆ ಸಿಬ್ಬಂದಿಗಳ ಬೈಕ್ ಭಸ್ಮವಾಗಿರುವ ಘಟನೆ ತಾಲೂಕಿನ ಸಿಂದಿಗೆರೆ ಗ್ರಾಮದ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ.

ಅರಣ್ಯಕ್ಕೆ ಬಿದ್ದ ಬೆಂಕಿ ನಂದಿಸಲು ಹೋಗಿದ್ದ ಅರಣ್ಯ ಇಲಾಖೆ ಸಿಬ್ಬಂದಿಗಳ ಬೈಕ್‌ ಕಾಡ್ಗಿಚ್ಚಿಗೆ ಮೂರು ಬೈಕ್ ಗಳು ಧಗ-ಧಗ ಹೊತ್ತಿ ಉರಿದು ಹೋಗಿವೆ ಎಂದು ತಿಳಿದು ಬಂದಿದೆ. ಗಾಳಿಯ ರಭಸಕ್ಕೆ ರಸ್ತೆಯಲ್ಲಿ ನಿಲ್ಲಿಸಿದ್ದ ಬೈಕ್ ಸುಟ್ಟು ಕರಕಲಾಗಿದೆ ಎನ್ನಲಾಗಿದೆ.