ಡೈಲಿ ವಾರ್ತೆ:09 ಮಾರ್ಚ್ 2023

ಕಿನ್ನಿಗೋಳಿ:ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಓಮ್ಮಿ ಕಾರು, ನಾಲ್ವರು ಪಾರು

ಮುಲ್ಕಿ: ಕಿನ್ನಿಗೂಳಿ ಮೂಡಬಿದ್ರೆ ರಾಜ್ಯ ಹೆದ್ದಾರಿಯ ಕಮ್ಮಾಜೆ ನೇಕಾರ ಕಾಲೋನಿ ಬಳಿ ಓಮ್ಮಿ ಕಾರು ಚಾಲಕನ ನಿಯಂತ್ರಣ ತಪ್ಪಿ, ಮರಕ್ಕೆ ಡಿಕ್ಕಿ ಹೊಡೆದಿದ್ದು ಕಾರಿನಲ್ಲಿದ್ದ ನಾಲ್ವರು ಪವಾಡ ಸದೃಶ ಪಾರಾಗಿದ್ದಾರೆ. ಉಜಿರೆ ಕಡೆಯಿಂದ ಹಳೆಯಂಗಡಿ ಕಡೆಗೆ ಬರುತ್ತಿದ್ದ ಒಮ್ಮಿ ಕಾರು ಕಿನ್ನಿಗೋಳಿ ಸಮೀಪದ ಮೂರುಕಾವೇರಿ ಕಮ್ಮಾಜೆ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಓಮ್ಮಿ ಕಾರಿನ ಎದುರು ಭಾಗ ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಚಾಲಕ ಹಾಗೂ ಮಗು ಸೇರಿ ನಾಲ್ವರು ಪ್ರಯಾಣಿಕರು ಅಲ್ಪಸಲ್ಪ ಗಾಯಗಳೊಂದಿಗೆ ಪವಾಡ ಸದೃಶ ಪಾರಾಗಿದ್ದಾರೆ.

ಗಾಯಾಳು ಪ್ರಯಾಣಿಕರು ಉಜಿರೆ ಕಡೆಯಿಂದ ಮದುವೆ ಮುಗಿಸಿ ವಾಪಸ್ ತಮ್ಮ ಊರಿಗೆ ಬರುತ್ತಿದ್ದರು ಎನ್ನಲಾಗಿದ್ದು ನಿದ್ರೆ ಮಂಪರಿನಲ್ಲಿ ಅಪಘಾತ ನಡೆದಿರಬಹುದು ಎಂದು ಶಂಕಿಸಲಾಗಿದೆ.