ಡೈಲಿ ವಾರ್ತೆ:10 ಮಾರ್ಚ್ 2023

ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರಿಂದ ಶಿಲಾನ್ಯಾಸ

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗುರುವಾರ ಶಿಲಾನ್ಯಾಸ ನೆರವೇರಿಸಿದರು.

ರೂ.10 ಲಕ್ಷ ಅನುದಾನದ ರಾಮರೆಪಾಲು ಹೊಸಹೊಕ್ಲು ರಸ್ತೆ ಉದ್ಘಾಟನೆ, 30 ಲಕ್ಷ ಅನುದಾನದ ನಡುರ್ದಿಲ ತಡೆಗೋಡೆ, 2 ನೇ ವಾರ್ಡಿನ ಜನತಾ ಕಾಲನಿ ರಸ್ತೆ ಉದ್ಘಾಟನೆ, ಉರ್ದಿಲ ಕ್ರೀಡಾಂಗಣದ ಹೈ ಮಾಸ್ಕ್ ದೀಪ ಉದ್ಘಾಟನೆ, 13 ಲಕ್ಷ ವೆಚ್ಚದ ಕರಿಂಕ ಅಂಗನವಾಡಿ ಕೇಂದ್ರ ಉದ್ಘಾಟನೆ, 15 ಲಕ್ಷ ವೆಚ್ಚದ ಪಂತಡ್ಕ ಗುಂಡ್ಯ ಎಲ್ಕಾಜೆ ಪರಿಶಿಷ್ಠ ಪಂಗಡ ಕಾಲನಿ ರಸ್ತೆ ಕಾಂಕ್ರೀಟಿಕರಣ,10 ಲಕ್ಷ ಮಾದೇಲು ಮೀನಾವು ರಸ್ತೆಗೆ ಶಿಲಾನ್ಯಾಸ, 10 ಲಕ್ಷ ಅನುದಾನದಲ್ಲಿ ಮೈಕೆ ಯಿಂದ ಏಮಾಜೆ ರಸ್ತೆ ಉದ್ಘಾಟನೆ, 50 ಲಕ್ಷ ವೆಚ್ಚದ ಏಮಾಜೆ ರಸ್ತೆಗೆ ಶಿಲಾನ್ಯಾಸ ,14ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕರಿಂಕ ಹೊಸ ಹೊಕ್ಲು ಕಾಲುಸಂಕ ಉದ್ಘಾಟನೆ, 10 ಲಕ್ಷದ ಕಾಂಕ್ರಿಟೀಕರಣಗೊಂಡ ನೇರಳಕಟ್ಟೆ ಕುರ್ಲೆತ್ತಿಮಾರ್ ರಸ್ತೆ ಹಾಗೂ ನೆಟ್ಲಮುಡ್ನೂರು ಗ್ರಾ.ಪಂ.ಕಚೇರಿ ಬಳಿ ನಿರ್ಮಾಣಗೊಂಡ ಜಲಜೀವನ್ ಮಿಷನ್ ಯೋಜನೆಯ ಮೇಲ್ ಸ್ತರದ ನೀರಿನ‌ಟ್ಯಾಂಕನ್ನು ಶಾಸಕರು‌ ಉದ್ಘಾಟಿಸಿದರು.


ನೆಟ್ಲ‌ಮುಡ್ನೂರು‌ ಗ್ರಾ.ಪಂ.ಅಧ್ಯಕ್ಷ ಸಚ್ಚಿದಾನಂದ, ಉಪಾಧ್ಯಕ್ಷೆ ಶಕೀಲಾ, ಸದಸ್ಯ ಧನುಂಜಯ
ಅನಂತಾಡಿ ಗ್ರಾ.ಪಂ.ಅಧ್ಯಕ್ಷ ಗಣೇಶ್ ಪೂಜಾರಿ, ಸದಸ್ಯೆ ಸುಜಾತ, ವಿಟ್ಲ ಪಡ್ನೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಸನತ್ ಕುಮಾರ್ ರೈ, ತನಿಯಪ್ಪ ಗೌಡ, ರವೀಂದ್ರ ರೈ, ಧನಲಕ್ಷ್ಮಿ ಪೂಜಾರಿ, ಪಿಡಿಓ ಅನುಷಾ, ವಿಟ್ಲ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಷಾ, ಮೇಲ್ವಿಚಾರಕಿ ಸೋಮಕ್ಕ, ಅಂಗನವಾಡಿ ಕಾರ್ಯಕರ್ತೆ ಯೋಗಿನಿ ಮೊದಲಾದವರು ಉಪಸ್ಥಿತರಿದ್ದರು.