ಡೈಲಿ ವಾರ್ತೆ:12 ಮಾರ್ಚ್ 2023

✒️ ಓಂಕಾರ ಎಸ್. ವಿ. ತಾಳಗುಪ್ಪ

ಸಾಗರ: ಆವಿನಹಳ್ಳಿ ಸಮೀಪ ಅಪರಿಚಿತ ವಾಹನ ಡಿಕ್ಕಿ ಗಂಡು ಕಾಡುಕೋಣ ಸಾವು

ಸಾಗರ: ರಸ್ತೆ ಅಪಘಾತದಲ್ಲಿ ಕಾಡುಕೋಣ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಆವಿನಹಳ್ಳಿ ಗ್ರಾಮಪಂಚಾಯಿತಿ ಕಲ್ಮನೆ ಗ್ರಾಮದಲ್ಲಿ ಇಂದು ಬೆಳಗ್ಗಿನ ಜಾವ ಈ ಘಟನೆ ಸಂಭವಿಸಿದೆ.

ಸಾಗರ ಮತ್ತು ಸಿಗಂದೂರು ರಸ್ತೆಯಲ್ಲಿ ಸುಮಾರು 5 ವರ್ಷದ ಗಂಡು ಕಾಡುಕೋಣ ರಕ್ತ ಕಾರಿಕೊಂಡು ರಸ್ತೆಯ ಬಲಭಾಗಕ್ಕೆ ಬಿದ್ದಿದ್ದು ಲಾರಿ ಅಥವಾ ದೊಡ್ಡ ವಾಹನಗಳೇ ಈ ಕಾಡು ಪ್ರಾಣಿಯ ಸಾವಿಗೆ ಕಾರಣವಿರಬಹುದು ಎಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಅರಣ್ಯ ಇಲಾಖೆಯವರು ಧಾವಿಸಿ ಪರಿಶೀಲಿಸಿದ್ದಾರೆ.