ಡೈಲಿ ವಾರ್ತೆ:13 ಮಾರ್ಚ್ 2023

ಬೈಕ್ ಗೆ ಹಿಂಬದಿಯಿಂದ ಕಾರು ಢಿಕ್ಕಿ: ಬೈಕ್ ಸವಾರ ಸಾವು

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪುಂಜಾಲಕಟ್ಟೆ ಸಮೀಪ ಕಾರೊಂದು ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮವಾಗಿ ದ್ವಿಚಕ್ರ ವಾಹನ ಸವಾರ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ರಾಯಿ ಎಂಬಲ್ಲಿ ನಡೆದಿದೆ.
ಸಾವನ್ನಪ್ಪಿದ ವ್ಯಕ್ತಿ ಬಂಟ್ವಾಳ ಬೈಪಾಸ್ ನಿವಾಸಿ, ವಿದ್ಯುತ್ ಗುತ್ತಿಗೆದಾರ ಚಂದ್ರಶೇಖರ (50)ಎಂದು ತಿಳಿದು ಬಂದಿದೆ.

ಬಂಟ್ವಾಳ ನಿವಾಸಿ ಇಡ್ಲಿ ಯೋಗೀಶ್ ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಎಂದು ತಿಳಿಯಲಾಗಿದೆ.

ರಾತ್ರಿ ಸುಮಾರು 11 ಗಂಟೆಗೆ ಸಿದ್ದಕಟ್ಟೆಯಿಂದ ಬಂಟ್ವಾಳ ಕಡೆ ಬರುತ್ತಿದ್ದ ವೇಳೆ ರಾಯಿ ಎಂಬಲ್ಲಿ ಹಿಂಬದಿಯಿಂದ ಬರುತ್ತಿದ್ದ ಕಾರು ಢಿಕ್ಕಿಯಾಗಿದೆ. ಢಿಕ್ಕಿಯಾದ ರಭಸಕ್ಕೆ ದ್ವಿಚಕ್ರದಲ್ಲಿ ಹಿಂಬದಿಯ ಸವಾರನಾಗಿದ್ದ ಚಂದ್ರಶೇಖರ ರಸ್ತೆಗೆ ಎಸೆಯಲ್ಪಟ್ಟು ಸಾವನ್ನಪ್ಪಿದ್ದಾರೆ.

ಚಾಲಕ ಯೋಗೀಶ್ ಅವರ ತಲೆಗೆ ಗಂಭೀರವಾಗಿ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರು ಚಾಲಕನ ಅತಿವೇಗದ ಹಾಗೂ ಅಜಾಗರೂಕತೆಯ ಚಾಲನೆಯೆ ಘಟನೆಗೆ ಕಾರಣವೆನ್ನಲಾಗಿದೆ.
ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ಮಾಡಿದರು ಪರಿಶೀಲನೆ ನಡೆಸಿದ್ದಾರೆ.