ಡೈಲಿ ವಾರ್ತೆ:15 ಮಾರ್ಚ್ 2023

ಕೊಡಗು ಕಾಡಾನೆ ದಾಳಿ ಗಂಭೀರ ಗಾಯಗೊಂಡ ಅರಣ್ಯ ಇಲಾಖೆ ಸಿಬ್ಬಂದಿ

ಕೊಡಗು: ಕಾಡಾನೆ ದಾಳಿಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯೋರ್ವರು ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಬೇಗೂರು ಗ್ರಾಮದ ಚಿನಿವಾಡ ಪೈಸಾರಿಯಲ್ಲಿ ನಡೆದಿದೆ.

ಕೆಲ ದಿನಗಳ ಹಿಂದೆ ಕಾಡಾನೆ ಮರಿಗೆ ಜನ್ಮ ನೀಡಿದ್ದು, ಜನಿಸುತ್ತಲೇ ಕಾಡಾನೆಯ ಮರಿ ಸಾವನ್ನಪ್ಪಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ್ದ RRT ಸಿಬ್ಬಂದಿ ತೇಜಸ್ ಎಂಬವರನ್ನು ಕಾಡಾನೆ ಬೆನ್ನಟ್ಟಿದ್ದು, ದಾಳಿಯಿಂದ ತಪ್ಪಿಸಿಕೊಳ್ಳಲು ಓಡುವ ಸಂದರ್ಭ ಬಿದ್ದು ಅವರು ಗಂಭೀರ ಗಾಯ‌ಗೊಂಡಿದ್ದಾರೆ.
ತೀವ್ರ ಗಾಯಗೊಂಡಿರುವ ತೇಜಸ್, ಸುಳ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.