ಡೈಲಿ ವಾರ್ತೆ:15 ಮಾರ್ಚ್ 2023

ಕುಂದಾಪುರ: ಅಂಗಡಿ ಮುಂದೆ ನಿಲ್ಲಿಸಿದ್ದ ಬೈಕ್ ಕಳವು, ದೂರು ದಾಖಲು

ಕುಂದಾಪುರ: ಕಸಬಾ ಗ್ರಾಮದ ಅಂಗಡಿಯೊಂದರ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವಾಗಿರುವ ಬಗ್ಗೆ ಕುಂದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ.

ಹಂಗಳೂರು ಗ್ರಾಮದ ಸಿದ್ದಲಿಂಗಪ್ಪ ಅವರು ಮಾ.9 ರಂದು ಸಂಜೆ ವೇಳೆ ತಮ್ಮ ಬೈಕ್ ನ್ನು ಕುಂದಾಪುರ ತಾಲೂಕಿನ ಕಸಬಾ ಗ್ರಾಮದ ಅಂಗಡಿಯೊಂದರ ಬಳಿ ನಿಲ್ಲಿಸಿ ತಮ್ಮ ಕೆಲಸಕ್ಕೆಂದು ಹೋಗಿದ್ದರು. ಬಳಿಕ ತಮ್ಮ ಕೆಲಸ ಮುಗಿಸಿ ವಾಪಸ್ಸು ಬಂದು ನೋಡಿದಾಗ ದ್ವಿಚಕ್ರ ವಾಹನ ನಿಲ್ಲಿಸಿದ ಸ್ಥಳದಲ್ಲಿ ಇಲ್ಲದೇ ಇರುವುದು ಕಂಡು ಬಂದಿದೆ. ಈ ವೇಳೆ ತಮ್ಮ ವಾಹನವನ್ನು ಎಲ್ಲಾ ಕಡೆ ಹುಡುಕಾಡಿದರೂ ಎಲ್ಲೂ ಪತ್ತೆಯಾಗಿರುವುದಿಲ್ಲ. ಅದರಂತೆ ತಮ್ಮ ದ್ವಿಚಕ್ರವಾಹನವನ್ನು ಕಳ್ಳರು ಕಳವು ಮಾಡಿಕೊಂಡು ಹೋಗಿರುವ ಸಾಧ್ಯತೆ ಇದೆ ಎಂಬುದಾಗಿ ನೀಡಿದ ದೂರಿನಂತೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.