ಡೈಲಿ ವಾರ್ತೆ:16 ಮಾರ್ಚ್ 2023

ಪುತ್ತೂರು: ಬಿಜೆಪಿ ನಗರ ಸಭೆ ಸದಸ್ಯ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಪುತ್ತೂರು ನಗರ ಸಭಾ ಸದಸ್ಯರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಶಿವರಾಮ ಸಪಲ್ಯ ಆತ್ಮಹತ್ಯೆ ಮಾಡಿಕೊಂಡ ನಗರ ಸಭಾ ಸದಸ್ಯ. ಇವರು ಉರುಮಾಲು ನಿವಾಸಿಯಾಗಿದ್ದು ನಗರ ಸಭೆ ಒಂದನೇ ವಾರ್ಡ್ ನ ಸದಸ್ಯರಾಗಿದ್ದಾರೆ.

ಇಂದು ಬೆಳಿಗ್ಗೆ ಪತ್ನಿ ಫೋನ್ ಕರೆ ಮಾಡಿದಾಗ ಶಿವರಾಮ ಸ್ವೀಕರಿಸುತ್ತಿಲ್ಲವೆಂದು ಪಕ್ಕದ ಮನೆಯವರಿಗೆ ವಿಚಾರಿಸಿದ್ದಾರೆ. ಅವರು ಮನೆ ಬಳಿ ಬಂದು ನೋಡಿದಾಗ ಶಿವರಾಮ್ ರವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಶಿವರಾಮ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.