ಡೈಲಿ ವಾರ್ತೆ:17 ಮಾರ್ಚ್ 2023

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಕಾರು ಢಿಕ್ಕಿ: ಇಬ್ಬರಿಗೆ ಗಾಯ

ಬಂಟ್ವಾಳ : ಬಿ.ಮೂಡ ಗ್ರಾಮದ ಗೂಡಿನಬಳಿಯಲ್ಲಿ ರಸ್ತೆ ಬದಿಯ ಅಂಗಡಿಯ ತಡೆಗೋಡೆಗೆ ಕಾರು ಢಿಕ್ಕಿಯಾದ ಪರಿಣಾಮ ಚಾಲಕ ಸಹಿತ ಇಬ್ಬರು ಗಾಯಗೊಂಡ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಬಿಸಿ ರೋಡಿನ ನ್ಯಾಯವಾದಿ, ನಂದಾವರ ನಿವಾಸಿ ಹಾತಿಂ ಅಹ್ಮದ್ ಅವರು ಕಾರು ಚಲಾಯಿಸುತ್ತಿದ್ದ ವೇಳೆ ಅನಾರೋಗ್ಯಕ್ಕೀಡಾಗಿ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಅಂಗಡಿಯ ತಡೆಗೋಡೆಗೆ ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನೆಯಿಂದ ತೀವ್ರ ಗಾಯಗೊಂಡಿರುವ ನ್ಯಾಯವಾದಿ ಹಾತಿಂ ಅಹ್ಮದ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದ್ದು, ಕಾರಿನಲ್ಲಿದ್ದ ತಾಜುದ್ದೀನ್ ಎಂಬವರಿಗೆ ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.