ಡೈಲಿ ವಾರ್ತೆ:18 ಮಾರ್ಚ್ 2023

ಕುಂದಾಪುರ:ಅಪರಿಚಿತ ಯುವಕನ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ಅಪರಿಚಿತ ಯುವಕನೊಬ್ಬನ ಮೃತ ದೇಹವು ಗಿಡಗಂಟಿಗಳ ಮಧ್ಯೆ ಕೊಳೆತ ಸ್ಥಿತಿಯಲ್ಲಿ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಡ ಹಕ್ಲಾಡಿಯಲ್ಲಿ ಪತ್ತೆಯಾಗಿದೆ.

ಸ್ಥಳೀಯರು ಓಡಾಡುತ್ತಿದ್ದ ಸಂದರ್ಭ ವಿಪರೀತ ವಾಸನೆ ಬರುತ್ತಿದ್ದು, ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ.
ತಕ್ಷಣ ಗಂಗೊಳ್ಳಿ ಪೊಲೀಸರಿಗೆ ಸುದ್ಧಿ ಮುಟ್ಟಿಸಿದ್ದು, ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ಬಳಿಕ ಗಂಗೊಳ್ಳಿ 24×7 ಆಂಬ್ಯುಲೆನ್ಸ್ ಮೂಲಕ ಕುಂದಾಪುರ ಸರಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಯಿತು.

ಕೊಳೆತ ಸ್ಥಿತಿಯಲ್ಲಿದ್ದ ಶವ ಹೊರತೆಗೆಯಲು ಹಾಗೂ ಸಾಗಿಸಲು 24×7 ಇಬ್ರಾಹಿಂ ಗಂಗೊಳ್ಳಿ, ಕೃಷ್ಣ (ಕಿಟ್ಟ), ಸ್ವಯಂಸೇವಕ ನದೀಮ್ ಹಾಗೂ ಸಫ್ವಾನ್, ಗಂಗೊಳ್ಳಿ ಪೊಲೀಸ್ ಠಾಣಾ ಹೆಡ್ ಕಾನ್ಸ್ಟೇಬಲ್ ಚಂದ್ರಶೇಕರ್ ಸಹಕರಿಸಿದರು.

ಶವದ ಗುರುತು ಪತ್ತೆಯಾಗಿಲ್ಲ. ಅಲ್ಲದೇ ಯುವಕನನ್ನು ಯಾರಾದರೂ ಕೊಂದು ಹಾಕಿದ್ದಾರೆಯೇ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಅಥವಾ ಅಪಘಾತ ಸಂಭವಿಸಿ ಸಾವನ್ನಪ್ಪಿದ್ದಾನೆಯೇ ಎಂಬುದು ಮರಣೋತ್ತರ ಪರೀಕ್ಷೆಯ ಬಳಿಕವಷ್ಟೇ ತಿಳಿದು ಬರಬೇಕಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.