ಡೈಲಿ ವಾರ್ತೆ:19 ಮಾರ್ಚ್ 2023

‘ಸಮಸ್ತ’ ಮದ್ರಸ ಮ್ಯಾನೇಜ್ ಮೆಂಟ್ ಕೇಂದ್ರ ಸಮಿತಿಯ ಉಪಾಧ್ಯಕ್ಷರಾಗಿ ರಫೀಕ್ ಹಾಜಿ ನೇರಳಕಟ್ಟೆ ಪುನರಾಯ್ಕೆ

ಬಂಟ್ವಾಳ : ಪ್ರತಿಷ್ಠಿತ ‘ಸಮಸ್ತ’ ಮದ್ರಸ ಮ್ಯಾನೇಜ್ ಮೆಂಟ್ ಅಸೋಸಿಯೇಷನ್ ಇದರ ಕೇಂದ್ರ ಸಮಿತಿಯ ಉಪಾಧ್ಯಕ್ಷರಾಗಿ ದ.ಕ.ಜಿಲ್ಲಾ ಮದ್ರಸ ಮ್ಯಾನೇಜ್ ಮೆಂಟ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ರಫೀಕ್ ಹಾಜಿ ನೇರಳಕಟ್ಟೆ ಅವರು ಎರಡನೆಯ ಬಾರಿಗೆ ಪುನರಾಯ್ಕೆ ಯಾಗಿದ್ದಾರೆ.

ಕೇರಳ – ಚೇಳಾರಿಯ ಸಮಿತಿಯ ಕೇಂದ್ರ ಕಾರ್ಯಾಲಯದಲ್ಲಿ ‘ಸಮಸ್ತ’ ನಾಯಕರ ನೇತೃತ್ವದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಈ ಆಯ್ಕೆ ನಡೆಯಿತು.

‘ಸಮಸ್ತ’ ದ ಕೇಂದ್ರ ವಿದ್ಯಾಭ್ಯಾಸ ಬೋರ್ಡ್ ಸದಸ್ಯರಾಗಿ, ಪುತ್ತೂರು ರೇಂಜ್ ಮದ್ರಸ ಮ್ಯಾನೇಜ್ ಮೆಂಟ್ ಅಸೋಸಿಯೇಷನ್ ಇದರ ಅಧ್ಯಕ್ಷರಾಗಿ , ದ.ಕ.ಜಿಲ್ಲಾ ಮದ್ರಸ ಮ್ಯಾನೇಜ್ ಮೆಂಟ್ ಪ್ರಧಾನ ಕಾರ್ಯದರ್ಶಿ ಯಾಗಿ ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ರಫೀಕ್ ಹಾಜಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.