ಡೈಲಿ ವಾರ್ತೆ:21 ಮಾರ್ಚ್ 2023

ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ…ಈಶ್ವರಪ್ಪಗೆ ಟಾಂಗ್ ಕೊಟ್ಟು ಶಿವಮೊಗ್ಗದಲ್ಲಿ ಫ್ಲೆಕ್ಸ್ ಹಾಕಿಸಿದ ಬಿಜೆಪಿ ಎಂ.ಎಲ್.ಸಿ ಆಯನೂರು ಮಂಜುನಾಥ್

ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಪರೋಕ್ಷಾಗಿ ಟಾಂಗ್ ಕೊಟ್ಟು ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಫ್ಲೆಕ್ಸ್ ಹಾಕಿಸಿದ್ದಾರೆ.

ಎಂಎಲ್ ಸಿ ಆಯನೂರು ಮಂಜುನಾಥ್ ಅವರು ಯುಗಾದಿ ಹಾಗೂ ರಂಜಾನ್ ಹಬ್ಬಕ್ಕೆ ಶುಭಾಶಯ ಕೋರಿ ಫ್ಲೆಕ್ಸ್ ಹಾಕಿಸಿದ್ದಾರೆ.
ಪ್ಲೆಕ್ಸ್ ನಲ್ಲಿ ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ.., ಮುರಿದ ಮನಸುಗಳ ಬೆಸುಗೆಯಾಗಲಿ. ಶಿವಮೊಗ್ಗದಲ್ಲಿ ಶಾಂತಿ ಸೌಹಾರ್ಧತೆ ನೆಲೆಸಲಿ ಎಂದು ಬರೆಯಾಲಾಗಿದೆ. ಇದು
ಈಶ್ವರಪ್ಪ ವಿರುದ್ಧವೇ ಪರೋಕ್ಷವಾಗಿ ಬರೆಯಲಾಗಿದೆ ಎಂದು ಹೇಳಲಾಗುತ್ತಿದೆ.

ಆಯನೂರು ಮಂಜುನಾಥ್ ಹಿಂದಿನಿಂದಲೂ ಈಶ್ವರಪ್ಪ ಅವರನ್ನು ಫ್ಲೆಕ್ಸ್ ಹಾಕಿ ಪರೋಕ್ಷವಾಗಿ ಕುಟುಕಿದ್ದರು.
ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಆಯನೂರು ಮಂಜುನಾಥ್ ಇದೀಗ ಮತ್ತೆ ಈಶ್ವರಪ್ಪ ವಿರುದ್ಧ ಪರೋಕ್ಷವಾಗಿ ಫ್ಲೆಕ್ಸ್ ಹಾಕಿಸಿದ್ದಾರೆ.