ಡೈಲಿ ವಾರ್ತೆ:22 ಮಾರ್ಚ್ 2023

ಬೈಕ್ ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ಅಪಘಾತ; ಇಬ್ಬರು ಯುವಕರು ಮೃತ್ಯು

ಚಿಕ್ಕಮಗಳೂರು:ಕೆಎಸ್ಆರ್ ಟಿಸಿ ಬಸ್- ಬೈಕ್ ಗೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರಿನ ಕೃಷಿ ವ್ಯವಸಾಯೋತ್ಪನ್ನ ಕಚೇರಿ ಬಳಿ ಅಪಘಾತ ನಡೆದಿದ್ದು, ಮೃತರನ್ನು ಶ್ರೀಧರ್ (28) ದಯಾನಂದ (30) ಎಂದು ಗುರುತಿಸಲಾಗಿದೆ.

ವೇಗವಾಗಿ ಬಂದ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.
ಮೃತರ ಕುಟುಂಬಸ್ಥರ ರೋಧನ ಮುಗಿಲುಮುಟ್ಟಿದೆ.
ಈ ಕುರಿತು ಚಿಕ್ಕಮಗಳೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.