ಡೈಲಿ ವಾರ್ತೆ:23 ಮಾರ್ಚ್ 2023

ಮಾಜಿ ಸಚಿವ ಅಂಜನಮೂರ್ತಿ
ಹೃದಯಾಘಾತದಿಂದ ನಿಧನ

ಬೆಂಗಳೂರು : ವಸತಿ ಸಚಿವರಾಗಿ, ಉಪಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದ ಮಾಜಿ ಸಚಿವ ಅಂಜನಮೂರ್ತಿ (72) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇಂದು ಮುಂಜಾನೆ ಮಲ್ಲೇಶ್ವರಂನ ಅಪೋಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಇಂದಿರಾನಗರ ನಿವಾಸಿಯಾದ ಅಂಜನಮೂರ್ತಿ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಕಳೆದ ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಅಂಜನ ಮೂರ್ತಿ ಅವರು 10ನೇ ಏಪ್ರಿಲ್ 1941ರಲ್ಲಿ ಜನಿಸಿದರು. ಬಿಎ, ಬಿ.ಎಲ್ ಪದವೀಧರರು. 1989-1994 ಮತ್ತು 1999 ರಿಂದ 23 ಫೆಬ್ರವರಿ 2004 ರಿಂದ 2007 ಠಂಪಿಂಗ್ ಮೂರು ಬಾರಿ ಆಯ್ಕೆ ಸಮೀಪದ ಪ್ರತಿಸ್ಪರ್ಧಿಗಿಂತ 37000 ಮತಗಳ ಬಹುಮತ ಸಾಧಿಸಿದ್ದರು.
ರಾಜಕೀಯ ಚಟುವಟಿಕೆಗಳು ಮಾರ್ಚ್ 1993ರಲ್ಲಿ ಕರ್ನಾಟಕ ವಿಧಾನಸಭೆಯ ಉಪ ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. 2005-06 ರಿಂದ ವಸತಿ ಸಚಿವರಾಗಿದ್ದರು. ನವದೆಹಲಿಯಲ್ಲಿ ನಡೆದ 89 ಅಂತರ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಿದ್ದರು.
ಶಿರೋಮಣಿ ವಿಕಾಸ್ ಪ್ರಶಸ್ತಿ 93, ಮಾನವ ಸೇವಾ ಪುರಸ್ಕಾರ, ವಿಶೇಷ ಸ್ಕ್ರಾಲ್ ಆಫ್ ಆನರ್, ಇಂಟರ್‌ನ್ಯಾಶನಲ್‌ನಿಂದ ಎಕ್ಸಲೆನ್ಸ್-94 ಪ್ರಶಸ್ತಿಗೆ ಭಾಜನರಾಗಿದ್ದರು.