ಡೈಲಿ ವಾರ್ತೆ:25 ಮಾರ್ಚ್ 2023

ಉಳ್ಳಾಲ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

ಉಳ್ಳಾಲ:ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಕುಂಪಲ ಮೂರು ಕಟ್ಟೆ ನಿವಾಸಿ ಅಕ್ಷಯ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಅಕ್ಷಯ್‌, ತಾಯಿ ಬೀಡಿ ತೆಗೆದುಕೊಂಡು ತೆರಳಿದ್ದ ವೇಳೆ ಮನೆಯ ಕಿಟಕಿಗೆ ಬೈರಾಸಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌.

ಅಕ್ಷಯ್ ತೊಕ್ಕೊಟ್ಟಿನ ಮೊಬೈಲ್ ಸೆಂಟರ್ ವೊಂದರಲ್ಲಿ ಕೆಲಸಕ್ಕಿದ್ದು ಕಳೆದ 20 ದಿನಗಳಿಂದ ಕೆಲಸಕ್ಕೆ ಹೋಗಿಲ್ಲ ಎನ್ನಲಾಗಿದೆ.ಖಿನ್ನತೆಯಿಂದ ಅಕ್ಷಯ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂಪಲ ಈ ಪ್ರದೇಶದಲ್ಲಿ ಇತ್ತೀಚೆಗೆ ಕೆಲ ಆಕಸ್ಮಿಕ ಸಾವುಗಳು ವರದಿಯಾಗುತ್ತಿದ್ದು ಜನರು ಮಧ್ಯೆ ಒಂದು ರೀತಿಯ ಗುಸು ಗುಸು ಮಾತುಗಳು ಕೇಳಿ ಬರುತ್ತಿದೆ.