ಡೈಲಿ ವಾರ್ತೆ:29 ಮಾರ್ಚ್ 2023

ಬೈಕ್ ಹಾಗೂ ಲಾರಿ ನಡುವೆ ಅಪಘಾತ; ಯುವಕ ಮೃತ್ಯು, ಇನ್ನೋರ್ವನಿಗೆ ಗಾಯ

ಬೆಳ್ತಂಗಡಿ:ಬೈಕ್ ಮತ್ತು ಲಾರಿ ನಡುವೆ ಉಂಟಾದ ಅಪಘಾತದ ಬಳಿಕ ಲಾರಿಯ ಚಕ್ರದಡಿ ಸಿಲುಕಿ ಬೈಕ್ ಸವಾರ ಮೃತಪಟ್ಟ ಘಟನೆ ಧರ್ಮಸ್ಥಳ ಮುಂಡ್ರುಪ್ಪಾಡಿ ಎಂಬಲ್ಲಿ‌ ನಡೆದಿದೆ.

ಬೈಕ್ ಸವಾರ ಗುರುವಾಯನಕೆರೆ ನಿವಾಸಿ ಪ್ರಸಾದ್ ಶೆಟ್ಟಿ(27) ಮೃತಪಟ್ಟ ಯುವಕ. ಬೆಳ್ತಂಗಡಿ ಸರ್ವೆ ಇಲಾಖೆಯ ಸರ್ವೆ ಇದ್ದ ಕಾರಣ ಪ್ರಸಾದ್ ಕರ್ತವ್ಯ ಮುಗಿಸಿ ವಾಪಸ್ ಅಗುವ ವೇಳೆ ಮುಂಡ್ರುಪಾಡಿಯಲ್ಲಿ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಪ್ರಸಾದ್ ಲಾರಿಯ ಚಕ್ರದಡಿ ಸಿಲುಕಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮತ್ತೋರ್ವ ಸವಾರ ವಿಶ್ವನಾಥ್ ಗೆ ಕೂಡ ಗಾಯಗಳಾಗಿದೆ. ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಕುರಿತಂತೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.