ಡೈಲಿ ವಾರ್ತೆ:29 ಮಾರ್ಚ್ 2023

ಕೊಲ್ಲೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ; ಓರ್ವ ಮೃತ್ಯು, 8 ಜನರಿಗೆ ಗಂಭೀರ ಗಾಯ

‌ಕುಂದಾಪುರ;ಖಾಸಗಿ‌ ಬಸ್ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿ ಎಂಟು ಜನ ಗಂಭೀರ ಗಾಯಗೊಂಡ ಘಟನೆ ಕೊಲ್ಲೂರು ಹಾಲ್ಕಲ್ ಜಂಕ್ಷನ್ ಇಳಿಜಾರಿನ ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ.

ಗದಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಶಿರಹಟ್ಟಿ ನಿವಾಸಿ ರುದ್ರಪ್ಪ ಎಂಬುವರ ಪುತ್ರ ಬಸವರಾಜ್(22) ಮೃತರು ಎಂದು ಗುರುತಿಸಲಾಗಿದೆ.ಅಪಘಾತದಲ್ಲಿ ರಂಗಪ್ಪ, ಗೀರೀಶ್, ಮನೋಜ್ ಕುಮಾರ್, ಮಲ್ಲೇಶ್, ದೇವೇಂದ್ರ, ಹಾಲಸ್ವಾಮಿ, ಗುರುನಾಥ, ಅಭಿಜಿತ್ ಗಂಭೀರವಾಗಿದ್ದಾರೆ.

ಖಾಸಗಿ ಬಸ್ ಚಳ್ಳಕೆರೆಯಿಂದ ಮಂಗಳೂರಿಗೆ ತೆರಳುವಾಗ ಇಂದು ಬೆಳಿಗ್ಗೆ ನಸುಕಿನಲ್ಲಿ ಹಾಲ್ಕಲ್ ಜಂಕ್ಷನ್ ಇಳಿಜಾರಿನ ಬಳಿ ಬಸ್ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದೆ.

ಗಂಭೀರ ಗಾಯಗೊಂಡಿದ್ದ ಬಸವರಾಜ್ ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿಯಲ್ಲಿ ಮೃತಪಟ್ಟಿದ್ದು, ಮೃತ ದೇಹವನ್ನು ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿಡಲಾಗಿದೆ.
ಗಂಭೀರ ಗಾಯಗೊಂಡವರನ್ನು ಕುಂದಾಪುರದ ಸರ್ಕಾರಿ ಆಸ್ಪತ್ರೆ ಮತ್ತು ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.