ಡೈಲಿ ವಾರ್ತೆ:30 ಮಾರ್ಚ್ 2023

ತೀವ್ರ ಜ್ವರದಿಂದ 16 ವರ್ಷದ ಬಾಲಕನೋರ್ವ ಮೃತ್ಯು.!

ಕಿನ್ನಿಗೋಳಿ: ಇಲ್ಲಿನ ಪಕ್ಷಿಕೆರೆಯ ಬಾಲಕನೋರ್ವ ತೀವ್ರ ಜ್ವರದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಪಕ್ಷಿಕೆರೆ ಜುಮಾ ಮಸೀದಿ ಬಳಿಯ ನಿವಾಸಿ ಇಸ್ಮಾಯೀಲ್ ಅವರ ಪುತ್ರ ಹಿಲಾಲ್(16 )ಮೃತ ಬಾಲಕ ಎಂದು ತಿಳಿದು ಬಂದಿದೆ.

ಹಿಲಾಲ್ ಗೆ ಕೆಲದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಹಾಗಾಗಿ ಆತನನ್ನು ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎನ್ನಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ಬಂದಿದೆ.

ಆದರೆ, ಚಿಕಿತ್ಸೆ ಫಲಕಾರಿಯಾಗದೆ ಹಿಲಾಲ್ ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದು ಬಂದಿದೆ.

ಹಿಲಾಲ್‌ ರಾಮಣ್ಣಶೆಟ್ಟಿ ಆಂಗ್ಲಮಾಧ್ಯಮ ಶಾಲೆ ತಪೋವನ ತೋಕೂರು ಶಾಲೆಯ 10ನೇ ತರಗತಿ ವಿದ್ಯಾರ್ಥಿಯಾಗಿದ್ದು, ಪಕ್ಷಿಕೆರೆ ಅಲ್ ಬದ್ರಿಯಾ ಮದರಸದ ವಿದ್ಯಾರ್ಥಿಯಾಗಿದ್ದಾರೆ. ಇವರು ಎಸ್ಎಸ್ಎಫ್ ಪಕ್ಷಿಕೆರೆ ಘಟಕದ ಸದಸ್ಯ ಎಂದು ತಿಳಿದು ಬಂದಿದೆ.

ಮೃತ ಹಿಲಾಲ್ ತಂದೆ ಇಸ್ಮಾಯೀಲ್, ತಾಯಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಏಕೈಕ ಪುತ್ರ ಹಿಲಾಲ್: ತೀವ್ರ ಜ್ವರದಿಂದ ಬಳಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಬಾಲಕ ಹಿಲಾಲ್ ಅವರ ತಂದೆ ಇಸ್ಮಾಯೀಲ್ ಅವರ ಏಕೈಕ ಪುತ್ರನಾಗಿದ್ದು, ತಂದೆ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ. ಬಾಲಕನ ಅಕಾಲಿಕ ಮರಣದಿಂದ ಪಕ್ಷಿಕೆರೆ ಗ್ರಾಮ ವೀರವಮೌನಕ್ಕೆ ಶರಣಾಗಿದೆ.