ಡೈಲಿ ವಾರ್ತೆ:01 ಏಪ್ರಿಲ್ 2023

ತೆರಿಕೆರೆ:ಲಾಜಿಸ್ಟಿಕ್‌ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 17 ಕೆಜಿ ಚಿನ್ನ,ಬೆಳ್ಳಿ ಆಭರಣಗಳು ಚುನಾವಣಾಧಿಕಾರಿಗಳ ವಶ

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಎಂ.ಸಿ.ಹಳ್ಳಿ ಚೆಕ್‌ಪೋಸ್ಟ್‌ ಸಿಬ್ಬಂದಿ ವಾಹನ ತಪಾಸಣೆ ನಡೆಸಿದಾಗ 17 ಕೆ.ಜಿ. ಚಿನ್ನ ಹಾಗೂ ಬೆಳ್ಳಿಯ ಆಭರಣಗಳು ಪತ್ತೆಯಾಗಿವೆ.
ಸಿಕ್ವೆಲ್‌ ಸಂಸ್ಥೆ ಲಾಜಿಸ್ಟಿಕ್‌ ವಾಹನದಲ್ಲಿ ಚಿನ್ನ ಹಾಗೂ ಬೆಳ್ಳಿಯ ಆಭರಣಗಳು ಸಿಕ್ಕಿವೆ.

ಸಮರ್ಪಕವಾದ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 6.44 ಕೋಟಿ ರೂ. ಮೌಲ್ಯದ 17 ಕೆ.ಜಿ. ಚಿನ್ನ ಹಾಗೂ ಬೆಳ್ಳಿಯ ಆಭರಣಗಳು ಇರುವುದು ಪತ್ತೆಯಾಗಿದೆ. ಇನ್ನು ಅಧಿಕಾರಿಗಳು ವಾಹನ ಸಹಿತ ಚಿನ್ನ, ಬೆಳ್ಳಿಯ ಆಭರಣಗಳನ್ನು ಜಪ್ತಿ ಮಾಡಿದ್ದಾರೆ.

ಘಟನೆ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ರಮೇಶ್, ಎಸ್ಪಿ ಉಮಾ ಪ್ರಶಾಂತ್, ಜಿಪಂ ಸಿಇಒ ಪ್ರಭು ಭೇಟಿ ನೀಡಿ ಪರಿಶೀಲನೆ ನಡೆಸಿದರು.