ಡೈಲಿ ವಾರ್ತೆ:13 ಏಪ್ರಿಲ್ 2023

ಕೊಲ್ಲೂರು : ಒಂಬತ್ತನೇ ತರಗತಿ ವಿದ್ಯಾರ್ಥಿ ನಾಪತ್ತೆ!

ಬೈಂದೂರು: ಕೊಲ್ಲೂರು ಶ್ರೀಮೂಕಾಂಬಿಕಾ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಸಲಗೇರಿ ಕಂಟಗದ್ದೆ ನಿವಾಸಿ ದೇವದತ್ತ (16) ಎಂಬ ಬಾಲಕನು ಎಪ್ರಿಲ್ 11ರಂದು ಮನೆಯಿಂದ ಹೊರಗೆ ಹೋದವನು ವಾಪಸು ಬಾರದೇ ನಾಪತ್ತೆಯಾಗಿದ್ದಾನೆ.

4 ಅಡಿ 5 ಇಂಚು ಎತ್ತರ, ಕೋಲು ಮುಖ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಮಲೆಯಾಳಿ ಭಾಷೆ ಮಾತನಾಡುತ್ತಾನೆ. ಈತನ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, 3.30: 9480805460, 23, ವೃತ್ತ ನಿರೀಕ್ಷಕರ ಕಚೇರಿ 0.02: 08254-251031, .0: 9480805434 ಹಾಗೂ ಕಂಟ್ರೋಲ್ ರೂಂ: 100 (0820-2526444) ನ್ನು ಸಂಪರ್ಕಿಸಬಹುದು ಎಂದು ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.