ಡೈಲಿ ವಾರ್ತೆ:20 ಏಪ್ರಿಲ್ 2023

ಉಡುಪಿ:ಮೊಗವೀರ ಸಮುದಾಯದ ಮುಖಂಡ ಉದ್ಯಮಿ ಜಿ.ಶಂಕರ್ ಮನೆ, ಸಂಸ್ಥೆ ಮೇಲೆ ಐಟಿ ದಾಳಿ!

ಉಡುಪಿ: ಮೊಗವೀರ ಸಮುದಾಯದ ಮುಖಂಡ, ಉದ್ಯಮಿ ಜಿ.ಶಂಕರ್ ಅವರ ಮನೆ ಹಾಗೂ ಸಂಸ್ಥೆಗಳ ಮೇಲೆ ಆದಾಯ ತೆರಿಗೆ (IT) ಅಧಿಕಾರಿಗಳ ತಂಡ ಇಂದು ಬೆಳಗಿನ ಜಾವ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ.

ವಿಧಾನಸಭಾ ಚುನಾವಣಾ ಸಂದರ್ಭದಲ್ಲೇ ಐಟಿ ದಾಳಿ ನಡೆದಿರುವುದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದೆ. ಇಂದು ಬೆಳಗ್ಗಿನ ಜಾವ 6 ಗಂಟೆ ಸುಮಾರಿಗೆ ಬೆಂಗಳೂರು ನೋಂದಣಿಯ ಕಾರಿನಲ್ಲಿ ಬಂದಿರುವ ಅಧಿಕಾರಿಗಳ ತಂಡ ಏಕಕಾಲದಲ್ಲಿ ಜಿ.ಶಂಕರ್ ಮನೆ ಹಾಗೂ ಸಂಸ್ಥೆಗಳ ಮೇಲೆ ದಾಳಿ ನಡೆಸಿದೆ. ಪೂರ್ವಾಹ್ನ 11 ಗಂಟೆಯವರೆಗೆ ಪರಿಶೀಲನೆ ನಡೆಸಿದೆ ಎನ್ನಲಾಗಿದೆ.

ತಂಡವು ಸಂಸ್ಥೆಯ ಲೆಕ್ಕ ಪತ್ರ ಮತ್ತು ನಗದು ವಹಿವಾಟಿನ ವಿವರ ಪರಿಶೀಲನೆ ನಡೆಸಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.