ಡೈಲಿ ವಾರ್ತೆ:20 ಏಪ್ರಿಲ್ 2023

ಎ. 26 ರಂದು ಶ್ರೀ ಕ್ಷೇತ್ರ ಮಂದಾರ್ತಿ ದೇವಳದ ಧರ್ಮದರ್ಶಿಗಳಾದ ಎಚ್. ಧನಂಜಯ ಶೆಟ್ಟಿಯವರ 75ರ ಸಂಭ್ರಮ

ಕೋಟ: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಧರ್ಮದರ್ಶಿಗಳಾದ ಶ್ರೀ ಎಚ್. ಧನಂಜಯ ಶೆಟ್ಟಿಯವರ ಎಪ್ಪತ್ತನಾಲ್ಕು ವಸಂತಗಳನ್ನು ಪೂರೈಸಿ ಎಪ್ಪತ್ತೈದಕ್ಕೆ ಪಾದಾರ್ಪಣೆ ಮಾಡುತ್ತಿರುವ ಸುಸಂದರ್ಭದಲ್ಲಿ ಆಯೋಜಿಸಿರುವ ಸಾರ್ವಜನಿಕ “ಅಭಿನಂದನಾ ಸಮಾರಂಭ”ವು ದಿನಾಂಕ 26 ರಂದು ಬುಧವಾರ ಸಂಜೆ 5:30 ಕ್ಕೆ ಮಂದಾರ್ತಿ ರಥಬೀದಿಯಲ್ಲಿ ನಡೆಯಲಿರುವುದು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಸ್ರೂರು ಶ್ರೀ ಮಾಲಿಂಗೇಶ್ವರ ದೇವಸ್ಥಾನದ ಬಿ. ಅಪ್ಪಣ್ಣ ಹೆಗ್ಡೆ ವಹಿಸಲಿದ್ದಾರೆ.
ಗೌರವ ಉಪಸ್ಥಿತಿಯಲ್ಲಿ ಸಹ ಕುಲಾಧಿಪತಿಗಳು ಮಾಹೆ ಮಣಿಪಾಲದ ಡಾ. ಎಚ್. ಎಸ್. ಬಲ್ಲಾಳ್, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಇದರ ಪ್ರವರ್ತಕರಾದ ಜಿ. ಶಂಕರ್, ಮೂಡುಬಿದಿರೆ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಇದರ ಅಧ್ಯಕ್ಷ ಎಂ. ಮೋಹನ್ ಆಳ್ವ, ಇವರು ಉಪಸ್ಥಿತರಿರಲಿದ್ದಾರೆ.

ರಾತ್ರಿ 9:00 ಗಂಟೆಗೆ ವಿಶೇಷ ಆಕರ್ಷಣೆಗಳೊಂದಿಗೆ ಶ್ರೀ ಪೆರ್ಡೂರು ಮೇಳ ಹಾಗೂ ಅತಿಥಿ ಕಲಾವಿದರಿಂದ ಸಂಪ್ರದಾಯಿಕ ದೊಂದಿ ಬೆಳಕಿನ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಈ ಎಲ್ಲಾ ಕಾರ್ಯಕ್ರಮವು ನಮ್ಮ ಕುಡ್ಲ ಟಿವಿ ಮತ್ತು U ಟ್ಯೂಬ್ ಮೂಲಕ ದೇಶ ಮತ್ತು ವಿದೇಶದಾದ್ಯಂತ ನೇರ ಪ್ರಸಾರವಾಗಲಿದೆ ಎಂದು ಕಾರ್ಯಕ್ರಮದ ಆಯೋಜಕರು ಪ್ರಕಟಿಸಿದ್ದಾರೆ.