ಡೈಲಿ ವಾರ್ತೆ: 25 ಏಪ್ರಿಲ್ 2023

ಉಪ್ಪಳ : ರೈಲಿನಿಂದ ಎಸೆಯಲ್ಪಟ್ಟು ಯುವಕ ಸಾವು

ಕಾಸರಗೋಡು: ರೈಲಿನಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಸೋಮವಾರ ಉಪ್ಪಳ ಪೆರಿಂಗಡಿಯಲ್ಲಿ ನಡೆದಿದೆ. ಪಾಲಕ್ಕಾಡ್ ನ ಸಾಬೀರ್ (32) ಮೃತಪಟ್ಟವರು.

ಸ್ನೇಹಿತನ ಜೊತೆ ಗೋವಾಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಗೋವಾಕ್ಕೆ ತಲಪಿದಾಗ ಸಾಬೀರ್ ನಾಪತ್ತೆಯಾಗಿದ್ದು , ಈ ಬಗ್ಗೆ ಸ್ನೇಹಿತನು ಗೋವಾ ಪೊಲೀಸರಿಗೆ ದೂರು ನೀಡಿದ್ದರು. ಗೋವಾ ಪೊಲೀಸರು ಕೇರಳ ಮತ್ತು ಕರ್ನಾಟಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಳಿಕ ಕುಂಬಳೆ ಪೊಲೀಸ್ ಠಾಣೆ ಯ ಪೆರಿಂಗಡಿಯ ರೈಲ್ವೆ ಹಳಿ ಬಳಿ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿರಿಸಲಾಗಿದ್ದು, ಸಂಬಂಧಿಕರು ಆಗಮಿಸಿದ ಬಳಿಕ ಬಿಟ್ಟುಕೊಡಲಿದೆ.

ರೈಲಿನಿಂದ ಹೊರಕ್ಕೆಸೆಯಲ್ಪಟ್ಟು ಘಟನೆ ನಡೆದಿರಬಹುದು ಎಂದು ಪೊಲೀಸರು ಸಂಶಯಿಸಿದ್ದಾರೆ.