ಡೈಲಿ ವಾರ್ತೆ:26 ಏಪ್ರಿಲ್ 2023

ರಾಜ್ಯದಲ್ಲಿ ಮುಂದಿನ ಸಿಎಂ ಯಾರೆಂದು ಭವಿಷ್ಯ ನುಡಿದ ಮಂಡ್ಯದ ನಾಯಿ.!

ಮಂಡ್ಯ: ಕರ್ನಾಟಕದ ಚುನಾವಣೆಗೆ ಇನ್ನೇನು ಕೆಲವೇ ದಿನಗಳಿವೆ. ಈ ಸಂದರ್ಭದಲ್ಲಿ ಮಂಡ್ಯದ ನಾಯಿಯೊಂದು ಮುಂದಿನ ಸಿಎಂ ಯಾರೆಂದು ಭವಿಷ್ಯ ನುಡಿದ ಘಟನೆ ನಡೆದಿದೆ.

ಮಂಡ್ಯದ ಅಶೋಕನಗರದ ನಿವಾಸಿ ಗೋಪಿ ಎಂಬುವವರ ನಾಯಿಯೆ ಹೀಗೆ ಭವಿಷ್ಯ ಹೇಳಿರೋದು ಎಂದು ತಿಳಿದು ಬಂದಿದೆ. ಈ ನಾಯಿಯ ಹೆಸರು ಭೈರವ!

ಮಂಡ್ಯದ ಗೋಪಿ ಅವರು ಕಾಲ ಭೈರವೇಶ್ವರನ ಭಕ್ತರಾಗಿದ್ದಾರೆ. ಕಾಲ ಭೈರವನಿಗೆ ಪೂಜೆ ಮಾಡಿದ ಗೋಪಿಯವರು ಮುಂದಿನ ಸಿಎಂ ಯಾರಾಗ್ತಾರೆ ಎಂದು ನಾಯಿ ಬಳಿ ಭವಿಷ್ಯ ಕೇಳಲಾಗಿದೆ.
ಕಳೆದ ಎರಡು ವರ್ಷಗಳಿಂದ ಭೈರವ ಎಂಬ ಈ ನಾಯಿಯ ಸೂಚಿಸುವ ಭವಿಷ್ಯ ನಿಜವಾಗುತ್ತಿದೆ ಎಂಬ ನಂಬಿಕೆಯಿದೆಯಂತೆ.
ಬಸವರಾಜ ಬೊಮ್ಮಾಯಿ, ಎಚ್.ಡಿ. ಕುಮಾರಸ್ವಾಮಿ ಹಾಗೂ ಡಿಕೆ ಶಿವಕುಮಾರ್ ಅವರ ಮೂರು ಫೋಟೋಗಳನ್ನು ಇಟ್ಟು ಅಪ್ಪಣೆ ಕೇಳಿದ್ದಾರೆ.

ಈ ವೇಳೆ ಭೈರವ ನಾಯಿ ಎಚ್. ಡಿ.ಕುಮಾರಸ್ವಾಮಿ ಅವರ ಫೋಟೋವನ್ನು ಬಾಯಲ್ಲಿ ಕಚ್ಚಿ ಇವರೇ ಮುಂದಿನ ಸಿಎಂ ಆಗ್ತಾರೆ ಎಂದು ಸೂಚನೆ ನೀಡಿದೆ!

ಭೈರವ ನಾಯಿಯ ಹಲವು ಭವಿಷ್ಯಗಳು ಕಳೆದ ಎರಡು ವರ್ಷಗಳಿಂದ ನಿಜ ಆಗಿವೆಯಂತೆ. ಅದೇ ರೀತಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರಾಗ್ತಾರೆ ಎಂದು ಈ ಬಾರಿ ಸೂಚಿಸಿದ ಭವಿಷ್ಯ ಏನಾಗುತ್ತೆ ಎಂದು ಕಾದು ನೋಡಬೇಕಿದೆ.