ಡೈಲಿ ವಾರ್ತೆ:27 ಏಪ್ರಿಲ್ 2023

ಮಾಜಿ ಸಚಿವ ರಮಾನಾಥ ರೈಯವರ ನಾಯಕತ್ವವನ್ನು ಮೆಚ್ಚಿ ಸಮಾಜಸೇವಕ ಗುಬ್ಯಮೇಗಿನ ಗುತ್ತು ಕೆ. ಶ್ರೀಧರ ಶೆಟ್ಟಿ ಮತ್ತು ಪಟ್ಲಗುತ್ತು ದಾಮೋದರ ಶೆಟ್ಟಿ ಕಾಂಗ್ರೆಸ್ ಪಕ್ಷ ಸೇರ್ಪಡೆ!

ಬಂಟ್ವಾಳ : ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ. ರಮಾನಾಥ ರೈಯವರ ನಾಯಕತ್ವವನ್ನು ಮೆಚ್ಚಿ ಸಮಾಜ ಸೇವಕರು, ಸಾಮಾಜಿಕ ಚಿಂತಕರುಗಳಾದ ಗುಬ್ಯಮೇಗಿನ ಗುತ್ತು ಕೆ. ಶ್ರೀಧರ ಶೆಟ್ಟಿ ಮತ್ತು ಪಟ್ಲಗುತ್ತು ದಾಮೋದರ ಶೆಟ್ಟಿ ಕಾಂಗ್ರೆಸ್ ಪಕ್ಷಕ್ಕೆ ಬುಧವಾರ ಬಿ.ಸಿ.ರೋಡ್ ನಲ್ಲಿರುವ ಪಕ್ಷದ ಚುನಾವಣಾ ಕಚೇರಿಯಲ್ಲಿ ರಮಾನಾಥ ರೈ ಅವರ ಸಮ್ಮುಖದಲ್ಲಿ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಶ್ರೀಧರ ಶೆಟ್ಟಿ ಮಾತನಾಡಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ರಮಾನಾಥ ರೈಯವರನ್ನು ಮತ್ತೊಮ್ಮೆ ಗೆಲ್ಲಿಸಬೇಕು ಎಂಬ ಉದ್ದೇಶವಿದೆ. ಕ್ಷೇತ್ರದ ಜನತೆಯ ಮನವೊಲಿಸಿ ರೈ ಯವರನ್ನು ಮತ್ತೊಮ್ಮೆ ಶಾಸಕರನ್ನಾಗಿ ಮಾಡಲು ಶ್ರಮ ವಹಿಸುತ್ತೇವೆ ಎಂದರು.

ರಮಾನಾಥ ರೈ ಅಧಿಕಾರದಲ್ಲಿದ್ದಾಗ ಸಾಕಷ್ಟು ಪ್ರಗತಿ ಕಾರ್ಯಗಳನ್ನು ಮಾಡಿದ್ದಾರೆ. ಕ್ಷೇತ್ರಕ್ಕಾಗಿ ಅವರ ಕೊಡುಗೆಗಳನ್ನು ಸ್ಮರಿಸಿಕೊಂಡು ಜನತೆ ಮತದಾನ ಮಾಡಬೇಕು. ಅವರಂತಹ ದೂರದೃಷ್ಟಿಯುಳ್ಳ ನಾಯಕರು ನಮಗೆ ನಾಯಕರಾದರೆ ಮಾತ್ರ ಕ್ಷೇತ್ರದ ಅಭಿವೃದ್ಧಿ ಸಾಧ್ಯ ಎಂದು ದಾಮೋದರ ಶೆಟ್ಟಿ ತಿಳಿಸಿದರು.

ಈ ವೇಳೆ ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಉಸ್ಮಾನ್ ಕರೋಪಾಡಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧಾಕರ ಶೆಣೈ ಖಂಡಿಗ, ಹೊನ್ನಯ್ಯ, ಅಲ್ತಾಫ್ ಸಂಗಬೆಟ್ಟು, ನಾರಾಯಣ ನಾಯ್ಕ್, ಪರಮೇಶ್ವರ ಮೂಲ್ಯ ಮತ್ತಿತರರು ಉಪಸ್ಥಿತರಿದ್ದರು.