ಡೈಲಿ ವಾರ್ತೆ:27 ಏಪ್ರಿಲ್ 2023

ಸಿದ್ಧಕಟ್ಟೆ : ಶಾಸಕ ರಾಜೇಶ್ ನಾಯ್ಕ್ ರಿಂದ ರೋಡ್ ಶೋ, ಮತ ಯಾಚನೆ.

ಬಂಟ್ವಾಳ : ಬಂಟ್ವಾಳ ಶಾಸಕ, ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಸಿದ್ದಕಟ್ಟೆ ಚಚ್೯ ಬಳಿಯಿಂದ ಪೇಟೆಯ ತನಕ ಬುಧವಾರ ಸಂಜೆ ರೋಡ್ ಶೋ ನಡೆಸಿ ಮತಯಾಚನೆಗೈದರು.

ಹಲವಾರು ಕಾರ್ಯಕರ್ತರೊಂದಿಗೆ ಸಿದ್ದಕಟ್ಟೆಯ ಹೆದ್ದಾರಿಯಲ್ಲಿನ ಪ್ರತಿ ಮಳಿಗೆಗಳು, ರಿಕ್ಷಾ ಚಾಲಕರು, ಸಾರ್ವಜನಿಕರನ್ನು ಭೇಟಿಯಾಗಿ ಮತಯಾಚಿಸಿದರು.

ಬಳಿಕ ಸಿದ್ದಕಟ್ಟೆ ಜಂಕ್ಷನ್ ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ದ್ದೇಶಿಸಿ ಮಾತನಾಡಿದ ಅವರು ನಿತ್ಯವೂ ಗಲಭೆಯ ಗೂಡಾಗಿದ್ದ ಬಂಟ್ವಾಳವನ್ನು ಶಾಂತಿಯ ಬಂಟ್ವಾಳವನ್ನಾಗಿ ರೂಪಿಸಬೇಕು ಎಂಬ ಉದ್ದೇಶದಿಂದ ಶಾಸಕನಾಗಿ ಜವಾಬ್ದಾರಿ ಸ್ವೀಕರಿಸಿದ್ದು, ಎಲ್ಲರ ಸಹಕಾರದಿಂದ ಅದು ಕೈಗೂಡಿದೆ, ಜತೆಗೆ ಅಭಿವೃದ್ಧಿಯೂ ಸಾಕಾರಗೊಂಡಿದೆ. ಬಿಜೆಪಿಯು ಸಾಮಾನ್ಯ ಕಾರ್ಯಕರ್ತರಿಗೂ ಟಿಕೆಟ್ ನೀಡುತ್ತಿದ್ದು
ಇದು ಕಾರ್ಯಕರ್ತರ ಪಕ್ಷ ಎಂಬುದನ್ನು ಸಾಬೀತು ಪಡಿಸಿದೆ. ಪಕ್ಷ ಇದೀಗ ನನಗೆ ಮತ್ತೊಮ್ಮೆ ಅವಕಾಶ ನೀಡಿದ್ದು, ಜನತೆ ಆಶೀರ್ವಾದ ಮಾಡಿದರೆ ಬಂಟ್ವಾಳವನ್ನು ಮಾದರಿ ಕ್ಷೇತ್ರವನ್ನು ರೂಪಿಸುತ್ತೇನೆ ಎಂದರು.

ಕೇರಳ ರಾಜ್ಯ ಬಿಜೆಪಿ ಕೋಶಾಧಿಕಾರಿ ಕೃಷ್ಣದಾಸ್ ಅವರು ಮಾತನಾಡಿ, ದೇಶ ವಿರೋಧಿ ಚಟುವಟಿಕೆ ಯಲ್ಲಿರುವವರನ್ನು ಕಾಂಗ್ರೆಸ್ ಸ್ಟಾರ್ ಪ್ರಚಾರಕರನ್ನಾಗಿ ಮಾಡಿಕೊಂಡಿ ರುವುದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು. ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಶಾಸಕರಾಗಿ ಅತ್ಯುತ್ತಮವಾಗಿ ಕೆಲಸ ಮಾಡಿದ್ದು, 2000 ಕ್ಕೂ ಅಧಿಕ ಕೋಟಿ ಅನುದಾನವನ್ನು ತಂದು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಲ್ಲದೆ, ಕೋಮು ಸೂಕ್ಷ್ಮ ಪ್ರದೇಶವಾದ ಬಂಟ್ವಾಳವನ್ನು ಶಾಂತಿಯ ಬಂಟ್ವಾಳವನ್ನಾಗಿ ಪರಿವರ್ತಿಸಿದ್ದಾರೆ ಈ ಬಾರಿಯ ಚುನಾವಣೆಯಲ್ಲಿಯೂ ಅವರನ್ನು ಬಹುಮತದಿಂದ ಗೆಲ್ಲಿಸುವಂತೆ ಮನವಿ ಮಾಡಿದರು.

ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಚುನಾವಣಾ ಪ್ರಭಾರಿ ರವಿಶಂಕರ್ ಮಿಜಾರ್, ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಮಾಧವ ಮಾವೆ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಸಂಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಪೂಜಾರಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತದ್ದರು.

ಕೇರಳ – ಪಾಲಕ್ಕಾಡು ಬಿಜೆಪಿ ಜಿಲ್ಲಾಧ್ಯಕ್ಷ ಹರಿದಾಸ್, ಕುಕ್ಕಿಪಾಡಿ ಗ್ರಾ.ಪಂ.ಅಧ್ಯಕ್ಷೆ ಸುಜಾತ, ಪಕ್ಷ ಪ್ರಮುಖರಾದ ದೇವದಾಸ ಶೆಟ್ಟಿ, ಸುಲೋಚನಾ ಜಿ.ಕೆ.ಭಟ್, ಪ್ರಭಾಕರ ಪ್ರಭು, ಪುರುಷೋತ್ತಮ ಶೆಟ್ಟಿ ವಾಮದಪದವು, ರಮಾನಾಥ ರಾಯಿ, ಉಮೇಶ್ ಗೌಡ, ರಂಜಿತ್ ಮೈರ, ರತ್ನಕುಮಾರ ಚೌಟ, ಹರೀಶ್ ಆಚಾರ್ಯ, ಮಂದಾರತಿ ಶೆಟ್ಟಿ, ಸಂದೇಶ್ ಶೆಟ್ಟಿ, ದೇವರಾಜ್ ಸಾಲಿಯಾನ್, ರಾಜೇಶ್ ಶೆಟ್ಟಿ, ಸುನೀಲ್ ಶೆಟ್ಟಿಗಾರ್, ಸುರೇಶ್ ಕುಲಾಲ್, ವಿಶ್ವನಾಥ ಶೆಟ್ಟಿಗಾರ್, ಮಾಧವ ಶೆಟ್ಟಿಗಾರ್, ಮೋನಪ್ಪ ದೇವಸ್ಯ, ಪುರುಷೋತ್ತಮ ಸಾಲಿಯಾನ್ ನರಿಕೊಂಬು, ಭೋಜ ಶೆಟ್ಟಿಗಾರ್, ಯಶೋಧರ ಕರ್ಬೆಟ್ಟು, ದೇವಪ್ಪ ಗೌಡ, ಅಮ್ಮು ಕೋಟ್ಯಾನ್, ಓಬಯ್ಯ ಗೌಡ, ತೇಜಸ್ ಪೂಜಾರಿ, ನವೀನ್ ಪೂಜಾರಿ, ಸುರೇಶ್ ಅಂಚನ್, ಶೇಖರ ಶೆಟ್ಟಿ ಬದ್ಯಾರ್, ರತ್ನಾಕರ ಮದಂಗೋಡಿ, ಲಿಂಗಪ್ಪ ಪೂಜಾರಿ, ಸಂಜೀವ ಶೆಟ್ಟಿ ಮದಂಗೋಡಿ, ರಶ್ಮಿತ್ ಶೆಟ್ಟಿ, ದಿನೇಶ್ ಸುವರ್ಣ ರಾಯಿ, ವೀರೇಂದ್ರ ಸಿದ್ದಕಟ್ಟೆ, ನವೀನ್ ಆಯೋಧ್ಯೆ ಮೊದಲಾದವರು ರೋಡ್ ಶೋ ನಲ್ಲಿ ಭಾಗವಹಿಸಿದ್ದರು.

ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಸ್ವಾಗತಿಸಿ, ವಂದಿಸಿದರು.