ಡೈಲಿ ವಾರ್ತೆ:27 ಏಪ್ರಿಲ್ 2023

ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಮುಂದಾಗಿ ಪ್ರಿಯತಮೆ ನಿಂತಿದ್ದ ಚೇರ್ ತಳ್ಳಿ ಕೊಂದ ಪ್ರಿಯಕರ!

ಬೆಂಗಳೂರು: ಅನೈತಿಕ ಸಂಬಂಧದ ಹೊಂದಿದ್ದ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಬಸವೇಶ್ವರನಗರದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸರವಣ (35) ಎಂದು ಗುರುತಿಸಲಾಗಿದೆ.

ಈಕೆಗೆ ಮದುವೆಯಾಗಿ ಎರಡು ಮಕ್ಕಳಿದ್ದರೂ ಸಹ ಗಣೇಶ್ (22) ಎಂಬ ಯುವಕನ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಈಕೆ ಯುವಕನಿಗೆ 50 ಸಾವಿರ ರೂ. ಹಣ ಹಾಗೂ ಒಂದು ಮನೆಯನ್ನೂ ಸಹ ಮಾಡಿಕೊಟ್ಟಿದ್ದಳು.

ಇಷ್ಟೆಲ್ಲಾ ಇದ್ದರೂ ಗಣೇಶ್ ಬೇರೆ ಹುಡುಗಿಯೊಂದಿಗೆ ಸಲುಗೆಯನ್ನು ಬೆಳೆಸಿಕೊಂಡಿದ್ದನ್ನು . ಈ ವಿಷಯ ತಿಳಿದ ಸರವಣ ತಾನು ನೀಡಿದ ಹಣವನ್ನು ವಾಪಸ್ ಕೊಡುವಂತೆ ಕೇಳಿದ್ದಾಳೆ.

ಇದರಿಂದಾಗಿ ಇವರಿಬ್ಬರ ಮಧ್ಯೆ ಜಗಳ ನಡೆದಿದ್ದು, ಈ ವೇಳೆ ಇಬ್ಬರೂ ನೇಣು ಹಾಕಿಕೊಳ್ಳುತ್ತೇನೆಂದು ನಂಬಿಸಿ ಪರಸ್ಪರ ಕುಣಿಕೆ ಬಿಗಿದಾಗ ಚೇರನ್ನು ಗಣೇಶ್ ತಳ್ಳಿದಾಗ ಸರವಣಯ ಕುಣಿಕೆ ಬಿಗಿದು ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಬಸವೇಶ್ವರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.