ಡೈಲಿ ವಾರ್ತೆ:29 ಏಪ್ರಿಲ್ 2023

ಸಾಲಿಗ್ರಾಮ‌ ಕಾರು ಡಿಕ್ಕಿ ಸೈಕಲ್ ಸವಾರ ಸ್ಥಳದಲ್ಲೇ ಸಾವು

ಕೋಟ:ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೈಕಲ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಸಾಲಿಗ್ರಾಮ ಡಿವೈನ್ ಪಾರ್ಕ್ ಎದುರುಗಡೆ ಶನಿವಾರ ಮಧ್ಯಾಹ್ನ ನಡೆದಿದೆ.

ಸೈಕಲ್ ಸವಾರ ಗುಂಡ್ಮಿ ಭಗವತಿ ರಸ್ತೆಯ ಕೇಶವ ಮರಕಾಲ (41) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.

ಉಡುಪಿಯಿಂದ ಕುಂದಾಪುರ ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಕಾರು ಚಲಾಯಿಸಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಮಿಯಿಂದ ಸಾಲಿಗ್ರಾಮ ಕಡೆ ಹೋಗುತ್ತಿದ್ದ ಸೈಕಲ್ ಸವಾರನಿಗೆ ಹಿಂದಿನಿಂದ ಡಿಕ್ಕಿ ಹೊಡೆದು ಕಾರು ಪಲ್ಟಿ ಹೊಡೆದಿರುತ್ತದೆ. ಸೈಕಲ್ ಸವಾರ ಕೇಶವ ಮರಕಾಲ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ.
ಕಾರು ಚಾಲಕ ಸಣ್ಣ ಪುಟ್ಟಗಾಯಗಳಿಂದ ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಕಾರು ಚಾಲಕನ ನಿರ್ಲಕ್ಷ್ಯ ವೇ ಅಪಘಾತ ಕ್ಕೆ ಕಾರಣ ಎಂದು ಹೇಳಲಾಗಿದೆ.
ಸ್ಥಳಕ್ಕೆ ಕೋಟ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.