ಡೈಲಿ ವಾರ್ತೆ:01 ಮೇ 2023

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ನಾಗರಹಾವು ಹಾವು ಕಡಿದು ಮಹಿಳೆ ಮೃತ್ಯು!

ಮಂಡ್ಯ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಮಹಿಳೆ ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲೂಕು ಶ್ಯಾದನಹಳ್ಳಿ ಗ್ರಾಮದಲ್ಲಿ ಸೋಮವಾರ ವರದಿಯಾಗಿದೆ.

ಗ್ರಾಮದ ರೈತ ಮುಖಂಡ ಮುನಿಯಪ್ಪ ಅವರ ಪತ್ನಿ ಮಮತಾ (52) ಸಾವನ್ನಪ್ಪಿದ ಮಹಿಳೆ.
ಇವರು ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ನಾಗರಹಾವು ಕಚ್ಚಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮಮತಾ ಅವರನ್ನು ತಕ್ಷಣ ಪಾಂಡವಪುರ ಉಪವಿಭಾಗೀಯ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.